Advertisement

ಜುಲೈ 12ರಂದು ಟಿಇಟಿ ಪರೀಕ್ಷೆ: ಸಚಿವ ಸುರೇಶ್‌ ಕುಮಾರ್‌

08:56 PM May 22, 2020 | Sriram |

ಬೆಂಗಳೂರು: ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ ( ಸಿಟಿಇಟಿ) ಒಂದೇ ದಿನ ನಡೆಯುವ ಕಾರಣಕ್ಕೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ದಿನಾಂಕವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದೆ.

Advertisement

ಜು. 5ರಂದು ನಿಗದಿಯಾಗಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯ ದಿನದಂದು ಸಿಟಿಇಟಿ ಪರೀಕ್ಷೆ ನಡೆಯಲಿದೆ. ಇದರಿಂದ ಕರ್ನಾಟಕದ ಅಭ್ಯರ್ಥಿಗಳಿಗೆ ಸಮಸ್ಯೆ ಆಗಬಾರದು ಎಂಬ ಉದ್ದೇಶದಿಂದ ಟಿಇಟಿ ಪರೀಕ್ಷೆಯ ದಿನಾಂಕವನ್ನು ಮತ್ತೂಮ್ಮೆ ಪರಿಷ್ಕರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದರು.

ರಾಜ್ಯದ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಟಿಇಟಿ ಪರೀಕ್ಷೆಯನ್ನು ಜು.12ಕ್ಕೆ ನಡೆಸಲಾಗುವುದು. ಮಾರ್ಚ್‌ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆ ಕೋವಿಡ್-19 ಕಾರಣಕ್ಕೆ ಮುಂದೂಡಲಾಗಿತ್ತು. ಈಗ ಪರಿಷ್ಕೃತಗೊಳಿಸಿ ಜು. 12ರಂದು ನಡೆಸಲು ನಿರ್ಧರಿಸಿದ್ದೇವೆ. ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next