Advertisement

ರಾಜ್ಯದ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಪಠ್ಯ ಪರಿಶೀಲನೆ: ಸಚಿವ ನಾಗೇಶ್‌

08:09 PM Apr 26, 2022 | Team Udayavani |

ಬೆಂಗಳೂರು: ರಾಜ್ಯದ ಎಲ್ಲಾ ಕ್ರೈಸ್ತರ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಿಸುವ ಪಠ್ಯವನ್ನು ಪರಿಶೀಲಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಮೇಲೆ ನಿಗಾವಹಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ಸೂಚನೆ ನೀಡಲಾಗಿದೆ. ಈ ಶಿಕ್ಷಣ ಸಂಸ್ಥೆಗಳ ಪಠ್ಯ ಪರಿಶೀಲನೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಹೇಳಿದರು.

ಪ್ರತಿ ಬಿಇಒಗಳು ಕ್ರೈಸ್ತ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಒಂದು ವೇಳೆ ಸರ್ಕಾರದ ನೀತಿ ನಿಯಮಗಳಿಗೆ ವಿರುದ್ಧವಾಗಿ ಪಠ್ಯಕ್ರಮಗಳಿದ್ದರೆ, ಖಂಡಿತವಾಗಿಯೂ ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳ ಪ್ರವೇಶಾತಿ ವೇಳೆ ಬೈಬಲ್‌ ಓದಲು ಒಪ್ಪಿಗೆ ಇದೆಯೇ ಎಂದು ಕೇಳುತ್ತಾರೆ. ಕೆಲವು ಶಿಕ್ಷಣ ಸಂಸ್ಥೆಗಳು ಒಪ್ಪಿಗೆ ಕೊಟ್ಟ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾತಿ ಕೋಡುತ್ತಾರೆ. ಇದು ಕರ್ನಾಟಕ ಶಿಕ್ಷಣ ಕಾಯ್ದೆಯ ಉಲ್ಲಂಘನೆ. ಒಂದು ವೇಳೆ ಬೈಬಲ್‌ ಓದಲು ನಿರಾಕರಿಸಿದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರವೇಶ ಕೊಡುವುದಿಲ್ಲ ಎಂಬ ನಿಯಮಗಳನ್ನು ಅಳವಡಿಸಿಕೊಂಡಿವೆ.

ಇದನ್ನೂ ಓದಿ:ರಾಜ್ಯದಲ್ಲಿಂದು 85 ಕೋವಿಡ್‌ ಪ್ರಕರಣ; ಪಾಸಿಟಿವಿಟಿ ದರ ಶೇ. 1.18ಕ್ಕೆ ಏರಿಕೆ

Advertisement

ಈ ವಿಚಾರವಾಗಿ ಬೇರೆ ಸಂದರ್ಭದಲ್ಲಿ ಮಾತನಾಡುವ ವಿರೋಧ ಪಕ್ಷಗಳು ಈಗ ಏಕೆ ಮಾತನಾಡುತ್ತಿಲ್ಲ? ಟಿಪ್ಪು, ಹಿಜಾಬ್‌ ವಿಚಾರಕ್ಕೆ ಮಾತನಾಡುವವರು ಬೈಬಲ್‌ ವಿಷಯದಲ್ಲಿ ಮೌನ ವಹಿಸಿರುವುದು ಏಕೆ ಎಂದು ಪ್ರಶ್ನಿಸಿದರು.

ಕ್ಲಾರೆನ್ಸ್‌ ಶಾಲೆಯಲ್ಲಿ ಬೈಬಲ್‌ ಕಡ್ಡಾಯಗೊಳಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕ್ಲಾರೆನ್ಸ್‌ ಶಾಲೆಗೆ ಎಲ್ಲಾ ಧರ್ಮದ ಮಕ್ಕಳು ಬರುತ್ತಾರೆ. ಅವರಿಗೆ ನಿಯಮಾನುಸಾರವಾಗಿ ಪಾಠ-ಪ್ರವಚನಗಳನ್ನು ಮಾಡಬೇಕು. ಪ್ರಜಾಪ್ರಭುತ್ವದ ಅಡಿಯಲ್ಲಿ ನಾವು ಏನು ಕ್ರಮ ತೆಗೆದುಕೊಳ್ಳಬೇಕೇ ಅದನ್ನು ಮಾಡುತ್ತೇವೆ ಎಂದು ತಿಳಿಸಿದರು.

ಕರ್ನಾಟಕ ಶಿಕ್ಷಣ ನಿಯಮಗಳಿಗೆ ವಿರುದ್ಧವಾಗಿ ಧರ್ಮ ಬೋಧನೆ ಮಾಡುತ್ತಿರುವುದರಿಂದ ಈಗಾಗಲೇ ಕಾರಣ ಕೇಳಿ ಕ್ಲಾರೆನ್ಸ್‌ ಶಾಲೆಗೆ ನೋಟಿಸ್‌ ನೀಡಲಾಗಿದೆ. ಶಾಲಾ ಆಡಳಿತ ಮಂಡಳಿಯು ನೀಡುವ ಉತ್ತರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next