Advertisement

ಪಠ್ಯ ಪರಿಷ್ಕರಣೆ : ನಾಳೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ: ಸಿಎಂ

05:36 PM Jun 21, 2022 | Team Udayavani |

ಬೆಂಗಳೂರು: ಪಠ್ಯ ಪರಿಷ್ಕರಣೆ ಗೊಂದಲ ನಿವಾರಣೆ ಕುರಿತು ಬುಧವಾರ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮಾಜಿ ಪ್ರಧಾನಿಗಳು ಮತ್ತು ಹಿರಿಯರಾದ ಹೆಚ್‌.ಡಿ. ದೇವೇಗೌಡರು ಪಠ್ಯ ಪುಸ್ತಕ ಪರಿಷ್ಕರಣೆಯ ಬಗ್ಗೆ ಬರೆದಿರುವ ಪತ್ರಕ್ಕೆ ಗೌರವಪೂರ್ವಕವಾಗಿ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಮಂಗಳವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ನಾಳೆ (ಬುಧವಾರ) ಶಿಕ್ಷಣ ಇಲಾಖೆಯ ಮುಖ್ಯಸ್ಥರನ್ನು ಹಾಗೂ ಸಚಿವರನ್ನು ಕರೆಯಲಾಗುತ್ತಿದೆ.

ಇದನ್ನೂ ಓದಿ:ಪಣಜಿ : ಗೋವಾದತ್ತ ದೇಶಿಯ ಪ್ರವಾಸಿಗರು, ಪ್ರಮುಖ ಬೀಚ್‍ಗಳಲ್ಲಿ ಪ್ರವಾಸಿಗರ ಮೋಜುಮಸ್ತಿ

ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪತ್ರದ ಸಾರವನ್ನು ಅವಲೋಕಿಸಲಾಗುವುದು. ಅವರ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಬಗ್ಗೆ ತೀರ್ಮಾನಿಸಿ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next