Advertisement

ಸಾಲಗಾರರ ಕಾಟ ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಬಟ್ಟೆ ವ್ಯಾಪಾರಿ

02:36 PM Jul 19, 2022 | Team Udayavani |

ಹುಬ್ಬಳ್ಳಿ: ಸಾಲಗಾರರ ಕಾಟ ತಾಳಲಾರದೆ ಬಟ್ಟೆ ವ್ಯಾಪಾರಿಯೊಬ್ಬರು ಇಲ್ಲಿನ ಉಣಕಲ್ಲ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

Advertisement

ಇಲ್ಲಿನ ಅಶೋಕ ನಗರ ನಿವಾಸಿ ಸುನೀಲ ಧೋಂಗಡಿ (34) ಆತ್ಮಹತ್ಯೆ ಮಾಡಿಕೊಂಡ ವ್ಯಾಪಾರಿ.

ವ್ಯಾಪಾರಕ್ಕಾಗಿ ಅವರಿವರ ಬಳಿ ಹೆಚ್ಚಿನ ಬಡ್ಡಿ ದರದಲ್ಲಿ ಸಾಲ ಮಾಡಿದ್ದರು. ವ್ಯಾಪಾರದಲ್ಲಿ ನಷ್ಟವುಂಟಾಗಿ ಸಾಲಗಾರರಿಗೆ ಬಡ್ಡಿ ಹಣ ಕೊಡಲಾಗದ್ದಕ್ಕೆ ಪದೇ ಪದೇ ಮನೆಗೆ ಬಂದು ಹಣ ಕೊಡುವಂತೆ ಕಿರುಕುಳ ಕೊಡುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಜನ್ಮದಿನ ಆಚರಣೆ ಬೇಡವೆಂದು ಮಲ್ಲಿಕಾರ್ಜುನ ಖರ್ಗೆ ಪತ್ರ: ಸಿದ್ದರಾಮೋತ್ಸವಕ್ಕೆ ಟಾಂಗ್ ?

ಘಟನಾ ಸ್ಥಳಕ್ಕೆ ವಿದ್ಯಾನಗರ ಪೊಲೀಸರು ತೆರಳಿ ಪರಿಶೀಲಿಸುತ್ತಿದ್ದು, ಮೃತರ ಕುಟುಂಬಸ್ಥರಿಂದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next