Advertisement

ಶಿಗ್ಗಾವಿ ಕ್ಷೇತ್ರದ ಖುರ್ಷಾಪೂರದಲ್ಲಿ‌ ಜವಳಿ ಪಾರ್ಕ್ ಗೆ ಇಂದು ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ

11:51 AM Jul 16, 2022 | Team Udayavani |

ಶಿಗ್ಗಾವಿ:  ಇಂದು ಸ್ವಕ್ಷೇತ್ರ ಶಿಗ್ಗಾವಿ, ಸವಣೂರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಲಿದ್ದು, ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಆಯೋಜಿಸಿರುವ ಟೆಕ್ಸ್‌ಟೈಲ್ ಪಾರ್ಕ್ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Advertisement

ಅದರ ಜತೆಗೆ ಟೆಕ್ಸ್ ಪೋರ್ಟ್ ಸಿದ್ಧ ಉಡುಪು ಘಟಕದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಕೈಮಗ್ಗ ಹಾಗೂ ಜವಳಿ ಇಲಾಖೆಯಿಂದ ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಆಂಕರ್ ಪ್ರವರ್ತಕರ ಮಾದರಿಯಲ್ಲಿ 59.34 ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಆಗುತ್ತಿದೆ.

ಸಿದ್ಧ ಉಡುಪು ಘಟಕಗಳ ಹಾಗೂ ಜವಳಿ ಘಟಕಗಳ ಸ್ಥಾಪನೆಗೆ ಮೂರು ಹಂತಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಇದಕ್ಕಾಗಿ ಮೊದಲ ಹಂತದಲ್ಲಿ 25 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಆಂಕರ್ ಪ್ರವರ್ತಕ ಟೆಕ್ಸ್ ಪೋರ್ಟ್ ಪ್ರೈ ಲಿ ಕಂಪನಿ 42 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ದ ಉಡುಪು ಘಟಕ ನಿರ್ಮಾಣ ಮಾಡುತ್ತಿದೆ. ಇದರಿಂದ ಒಟ್ಟು 3000 ಜನರಿಗೆ ಉದ್ಯೋಗ ಲಭಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next