Advertisement

Thadakoda ಧರ್ಮ ದಂಗಲ್: ಗರಗ ಠಾಣೆ ಪಿಎಸ್‌ಐ ಅಮಾನತು

05:29 PM Jan 31, 2024 | Team Udayavani |

ಧಾರವಾಡ: ಧಾರವಾಡ ತಾಲೂಕಿನ ತಡಕೋಡ ಗ್ರಾಮದಲ್ಲಿ ನಡೆದ ಧರ್ಮ ದಂಗಲ್ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ್ ಅವರು ಗರಗ ಠಾಣೆ ಪಿಎಸ್‌ಐ ಡಿ.ಪ್ರಕಾಶ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Advertisement

ತಡಕೋಡ ಗ್ರಾಮದ ಸದ್ದಾಂಹುಸೇನ್ ಎಂಬ ಯುವಕ ಅಯೋಧ್ಯೆ ರಾಮಮಂದಿರದ ಫೋಟೋದ ಮೇಲೆ ಹಸಿರು ಧ್ವಜದ ಫೋಟೋ, ಓವೈಸಿ ಫೋಟೋ ಅದರ ಮೇಲೆ ಇದು ಇಸ್ಲಾಮಿಕ್ ಪವರ್ ಎಂಬ ಸಂದೇಶ ಹಾಕಿ ಫೋಟೋ ಎಡಿಟ್ ಮಾಡಿ ತನ್ನ ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದ. ಈ ವಿಷಯಕ್ಕೆ ಸಂಬಂಧಿಸಿದಂತೆ ಆ ಯುವಕನನ್ನು ಗರಗ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದರು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರು ಸದ್ದಾಂಹುಸೇನ್ ಮನೆ ಮುಂದೆ ಜಮಾಯಿಸಿದ್ದರು. ಗ್ರಾಮದಲ್ಲಿ ದ್ವೇಷಮಯ ವಾತಾವರಣವಿದ್ದರೂ ಮುಂಜಾಗೃತಾ ಕ್ರಮವಾಗಿ ಆ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮಾಡದ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ಗರಗ ಠಾಣೆ ಪಿಎಸ್‌ಐ ಪ್ರಕಾಶ ಅವರನ್ನು ಎಸ್‌ಪಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next