Advertisement

ರಿಯಾಯಿತಿ ಬೀಜ ವಿತರಣೆಗೆ ಚಾಲನೆ

03:28 PM Jun 20, 2020 | Naveen |

ತಾಳಿಕೋಟೆ: ರೈತ ಸಂಪರ್ಕ ಕೇಂದ್ರ ಮೂಲಕ ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿರುವ ಬಿತ್ತನೆ ಬೀಜಗಳನ್ನು ಸಾಮಾಜಿಕ ಅಂತರ ಕಾಯ್ದುಕೊಂಡು ಪಡೆದುಕೊಳ್ಳಬೇಕೆಂದು ವಿಜಯಪುರ ಜಂಟಿ ಕೃಷಿ ನಿರ್ದೇಶಕ ಡಾ| ಶಿವಕುಮಾರ ಹೇಳಿದರು.

Advertisement

ಪಟ್ಟಣದ ರೈತ ಸಂರ್ಕ ಕೇಂದ್ರಕ್ಕೆ ಭೇಟಿ ನೀಡಿ ಬೀಜ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮುಂಗಾರಿನಲ್ಲಿ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ರೈತರು ರಿಯಾಯಿತಿ ದರದ ಬಿತ್ತನೆ ಬೀಜ ಸಳಭ್ಯ ಸದಬಳಕೆ ಮಾಡಿಕೊಳ್ಳಬೇಕು ಎಂದರು.

ಕೃಷಿ ಜಾಗೃತ ದಳದ ಸಹಾಯಕ ಕೃಷಿ ನಿರ್ದೇಶಕ ಎಸ್‌.ಸಿ. ಪಾಟೀಲ, ಕೃಷಿ ಅಧಿಕಾರಿ ಮಹೇಶ ಜೋಶಿ, ಎಸ್‌.ಆರ್‌.ಕಟ್ಟಿಮನಿ, ಸಹಾಯಕ ಕೃಷಿ ಅಧಿಕಾರಿಗಳಾದ ವೈ.ಎಸ್‌. ಖಾಜಾಪುರ, ಎಸ್‌.ಬಿ. ಪಾಲ್ಕಿ, ಎಸ್‌.ಜಿ. ಬಿರಾದಾರ, ಎಂ.ಎಚ್‌. ಬೀಳಗಿ, ಜೆ.ಆರ್‌. ಮೂಲಿಮನಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next