Advertisement

ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದಕ್ಕೆ ಕಾಂಗ್ರೆಸ್‌ಗೆ ಥ್ಯಾಂಕ್ಸ್‌

10:22 AM Aug 01, 2018 | Team Udayavani |

ಹೊಸದಿಲ್ಲಿ: ಕೇಂದ್ರ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದಕ್ಕೆ ಕಾಂಗ್ರೆಸ್‌ಗೆ ಧನ್ಯವಾದ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ಮಂಗಳವಾರ ದಿಲ್ಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಈ ಬೆಳವಣಿಗೆಯಿಂದಾಗಿ ವಿಪಕ್ಷಗಳ ಬಂಡ ವಾಳ ಬಯಲು ಮಾಡಲು ತಮಗೆ ನೆರವಾಯಿತು ಎಂದು ಹೇಳಿದ್ದಾರೆ. ಹೀಗೆಂದು ಸಭೆಯ ಬಳಿಕ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್‌ ಮಾಹಿತಿ ನೀಡಿದ್ದಾರೆ.

Advertisement

ಅವಿಶ್ವಾಸ ಗೊತ್ತುವಳಿಯಿಂದಾಗಿ ವಿಪಕ್ಷ ಗಳು ರಾಜಕೀಯವಾಗಿ ಪ್ರೌಢಿಮೆ ಹೊಂದಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ ಎಂದರು. ಬಿಜೆಪಿ ಹಿರಿಯ ನಾಯಕ ಆಡ್ವಾಣಿ, ಕೇಂದ್ರ ಸಚಿವರಾದ ಗಡ್ಕರಿ, ಸುಷ್ಮಾ ಪ್ರಮುಖರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next