Advertisement

ತರೂರ್‌ ವಿರುದ್ಧ ಕುಮ್ಮನಂ ಸ್ಪರ್ಧೆ?

12:30 AM Mar 09, 2019 | Team Udayavani |

ತಿರುವನಂತಪುರಂ: ಕೇರಳ ಬಿಜೆಪಿ ಮಾಜಿ ಅಧ್ಯಕ್ಷ ಕುಮ್ಮನಂ ರಾಜಶೇಖರನ್‌ ಅವರು ಶುಕ್ರವಾರ ಏಕಾಏಕಿ ಮಿಜೋರಾಂ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ಹತ್ತೇ ತಿಂಗಳಲ್ಲಿ ಈ ನಿರ್ಧಾರ ಕೈಗೊಂಡಿರುವುದು ಅಚ್ಚರಿ ಮೂಡಿಸಿದೆ. ಇವರು ಲೋಕಸಭೆ ಚುನಾವಣೆಯಲ್ಲಿ ರಾಜಶೇಖರನ್‌ ಅವರು ತಿರುವನಂತಪುರದಲ್ಲಿ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಒಂದು ವೇಳೆ ಈ ಸುದ್ದಿ ನಿಜವಾದಲ್ಲಿ, ತಿರುವನಂತಪುರದಲ್ಲಿ ಎಲ್‌ಡಿಎಫ್, ಯುಡಿಎಫ್ ಹಾಗೂ ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. 2014ರ ಚುನಾವಣೆಯಲ್ಲಿ ಬಿಜೆಪಿ ಹಿರಿಯ ನಾಯಕ ಒ.ರಾಜಗೋಪಾಲ್‌ ಅವರು ತರೂರ್‌ಗೆ ಪೈಪೋಟಿ ನೀಡಿದ್ದು, ತರೂಲ್‌ ಕೇವಲ 15 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next