Advertisement

ಯಡಿಯೂರಪ್ಪ ಪ್ರಮಾಣ ಸ್ವೀಕಾರವೇ ಸಂವಿಧಾನಬಾಹಿರ

12:42 AM Jul 28, 2019 | Team Udayavani |

ಬೆಂಗಳೂರು: ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಿರುವುದೇ ಸಂವಿಧಾನ ಬಾಹಿರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರ‌ಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗ ಬಹುಮತ ಇಲ್ಲದೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ.

Advertisement

ವಿಧಾನಸಭೆಯಲ್ಲಿ 211 ಸದಸ್ಯರಿದ್ದಾರೆ. ಬಿಜೆಪಿ ಬಳಿ ಇರೋದು 105 ಸದಸ್ಯರು ಮಾತ್ರ. ಇವರಿಗೆ ಸಿಂಪಲ್ ಮೆಜಾರಿಟಿ ಎಲ್ಲಿದೆ ಎಂದು ಪ್ರಶ್ನಿಸಿದರು. ಬಿಜೆಪಿಯವರು ರಾಜ್ಯಪಾಲರಿಗೆ 111 ಸದಸ್ಯರ ಪಟ್ಟಿ ಸಲ್ಲಿಸಿದ್ದಾರಾ?. ಅತೃಪ್ತರ ಹೆಸರನ್ನು ಪಟ್ಟಿಯಲ್ಲಿ ತೋರಿಸಲು ಬರುವುದಿಲ್ಲ. ಇದು ಅಸಂವಿಧಾನಿಕವಾಗಿ ಸ್ಥಾಪನೆಗೊಂಡಿರುವ ಸರ್ಕಾರ. ಇದಕ್ಕೆ ಕಾನೂನಿನ ಚೌಕಟ್ಟಿನ ಮಾನ್ಯತೆ ಇಲ್ಲ ಎಂದರು. ಅತೃಪ್ತರು ವಿಶ್ವಾಸಮತದ ವೇಳೆ ಬಂದಿದ್ದರೆ ಕುಮಾರಸ್ವಾಮಿ ಸರ್ಕಾರ ಪತನವಾಗ್ತುತಿರಲಿಲ್ಲ. ಕುದುರೆ ವ್ಯಾಪಾರದ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು. ಬಿಜೆಪಿಗೆ ಬಾಹ್ಯ ಬೆಂಬಲ ನೀಡುವ ಕುರಿತಾದ ಜಿ.ಟಿ.ದೇವೇಗೌಡರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಆ ವಿಚಾರವನ್ನು ಅವರ ಬಳಿಯೇ ಕೇಳಿ ತಿಳಿದುಕೊಳ್ಳಿ. ನಾನು ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next