Advertisement

Bengaluru: ಪೊಲೀಸ್‌ ಜೀಪ್‌ನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ ಆರೋಪಿ

11:09 AM Aug 14, 2024 | Team Udayavani |

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಕೋರ್ಟ್‌ಗೆ ಕರೆ ತಂದಾಗ ಜೀಪ್‌ನಿಂದ ಜಿಗೆದು ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಸ್ಥಳೀಯರ ನೆರವು ಪಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಸುದ್ದುಗೊಂಟೆಪಾಳ್ಯ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಮನೋಜ್‌ನನ್ನು ಮಂಗಳವಾರ ಮಧ್ಯಾಹ್ನ ಸೆಷನ್ಸ್‌ ಕೋರ್ಟ್‌ಗೆ ಕರೆತರಲಾಗಿತ್ತು. ಆದರೆ, ಆರೋಪಿ ಕೋರ್ಟ್‌ ಆವರಣದಲ್ಲಿ ಜೀಪ್‌ ನಿಲುತ್ತಿದ್ದಂತೆ ಜಿಗಿದು ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಬೆನ್ನಟ್ಟಿದ ಪೊಲೀಸರು, ಸ್ಥಳೀಯರ ನೆರವು ಪಡೆದು ಕೋರ್ಟ್‌ ಗೇಟ್‌ ಬಳಿ ಹಿಡಿದದಿದ್ದಾರೆ. ಆರೋಪಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ. ಈತನ ವಿರುದ್ಧ ಹುಳಿಮಾವು ಮತ್ತು ರಾಜಾಜಿನಗರ ಪೊಲೀಸ್‌ ಠಾಣೆ ಯಲ್ಲೂ ದರೋಡೆ ಪ್ರಕರಣಗಳು ದಾಖಲಾಗಿದ್ದರಿಂದ, ಆ ಠಾಣೆಗಳ ಪೊಲೀಸರು ವಶಕ್ಕೆ ಪಡೆಯಲು  ಕೋರ್ಟ್‌ಗೆ  ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಆತನನ್ನು ಮಂಗಳವಾರ ಕೋರ್ಟ್‌ಗೆ ಕರೆತರಲಾಗಿತ್ತು. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ, ಪೊಲೀಸರು ಹಿಡಿದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಕರೆದೊಯ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next