Advertisement

Theft Case: ಪಕ್ಕದ ಮನೆಯ ಬೆಕ್ಕಿಗೆ ಹಾಲು ಹಾಕಲು ಬಂದು ಚಿನ್ನಾಭರಣ ಕದ್ದ ಆರೋಪಿ ಬಂಧನ

11:56 AM Jun 19, 2024 | Team Udayavani |

ಬೆಂಗಳೂರು: ಮನೆಗೆ ನುಗ್ಗಿ ಹಲ್ಲೆ ನಡೆಸಿ ಮೊಬೈಲ್‌ ಹಾಗೂ ಇತರೆ ವಸ್ತುಗಳನ್ನು ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಕೆ.ಜಿ.ಹಳ್ಳಿ ನಿವಾಸಿಗಳಾದ ಸೈಯದ್‌ ಪುರ್ಕನ್‌ ಅಹ್ಮದ್‌(32), ಪ್ರಜರ್‌ ಟೌನ್‌ ನಿವಾಸಿ ಮೊಹಮ್ಮದ್‌ ಜುಬೈರ್‌(26), ಆರ್‌.ಟಿ.ನಗರ ನಿವಾಸಿ ಕೃತಿಕ್‌ ಪ್ರೀತಂ(24) ಮತ್ತು ಎಚ್‌ಬಿಆರ್‌ ಲೇಔಟ್‌ ನಿವಾಸಿ ಪ್ರಶಾಂತ್‌ (24) ಬಂಧಿತರು. ಆರೋಪಿಗಳಿಂದ 5 ಮೊಬೈಲ್‌ಗ‌ಳು, 2 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ಜೂನ್‌ 5 ರಂದು ಮುಂಜಾನೆ 6.30ರ ಸುಮಾರಿಗೆ ಠಾಣೆ ವ್ಯಾಪ್ತಿಯಲ್ಲಿ ವಾಸವಾದ್ದ ತುಸಾರಕ್‌ ಎಂ. ಸಂಗಮಾ ಎಂಬು. ವರ ಮನೆಗೆ ನುಗ್ಗಿದ್ದರು. ಬಳಿಕ ತುಸಾ ರಕ್‌ ಜತೆ ವಾಸವಾಗಿದ್ದ ಮೋರ್ಗನ್‌, ನೆಬೊಂಕಾ ಅವರ ಮೇಲೆ ಹಲ್ಲೆ ನಡೆಸಿ ಪರ್ಸ್‌, ಮೊಬೈಲ್‌ಗ‌ಳನ್ನು ಕಸಿದು ಕೊಂಡಿದ್ದಾರೆ. ಅಲ್ಲದೆ, ಯುಪಿಐ ಪಾಸ್‌ ವರ್ಡ್‌ ಪಡೆದುಕೊಂಡು ಹೊರಗಡೆಯಿಂದ ಮನೆ ಲಾಕ್‌ ಮಾಡಿಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿ ಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದು, ಮೋಜಿ ಗಾಗಿ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next