Advertisement

Arrested: 32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

06:46 PM Aug 22, 2024 | Team Udayavani |

ಮಣಿಪಾಲ: ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 32 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

Advertisement

ಬಡಗಬೆಟ್ಟು ಮಣಿಪಾಲ ನಿವಾಸಿ ಗಣೇಶ್‌ ಪ್ರಭು (54) ಬಂಧಿತ ಆರೋಪಿ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. 1992ರ ಫೆ. 13ರಂದು ಶಿವರಾಮ ಎಂಬವರು ನೀಡಿದ ದೂರಿನಂತೆ ಆತನ ವಿರುದ್ಧ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತ 2001ರಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ನ್ಯಾಯಾಲಯ ವಾರಂಟ್‌ ಹೊರಡಿಸಿತ್ತು.

ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕ ರಾಘವೇಂದ್ರ ಸಿ. ಮತ್ತು ಎಚ್‌ಸಿ ಪ್ರಸನ್ನ ಉಪ್ಪೂರು ಅವರು ಆರೋಪಿ ಗಣೇಶ್‌ ಪ್ರಭು ಬೆಂಗಳೂರಿನಲ್ಲಿ ಇರುವುದನ್ನು ಪತ್ತೆ ಮಾಡಿ ಅಲ್ಲಿಂದ ಆ. 21ರಂದು ಬಂಧಿಸಿ ಉಡುಪಿಗೆ ಕರೆತಂದಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next