Advertisement

Karwar: 8 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

08:46 PM Oct 17, 2023 | Team Udayavani |

ಕಾರವಾರ: ಗಾಂಜಾ ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿ ಕಳೆದ 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರವಾರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಕಾರವಾರದ ಸದಾಶಿವಗಡ ನಿವಾಸಿ ಪ್ರಶಾಂತ ಸದಾಶಿವ ನಾಯರ್ ಬಂಧಿತ ಆರೋಪಿ. ಈತನ ಮೇಲೆ ಕಾರವಾರ ನಗರ ಠಾಣೆ ಪೊಲೀಸ್‌ ಠಾಣೆಯಲ್ಲಿ ಅಕ್ರಮ ಗಾಂಜಾ ಸಾಗಾಟ ಪ್ರಕರಣ 2013 ರಲ್ಲಿ ದಾಖಲಾಗಿತ್ತು. ಸದರಿ ಪ್ರಕರಣದಲ್ಲಿ ಬಂಧನದ ವಾರೆಂಟ್‌ ಕೂಡ ಜಾರಿಯಾಗಿತ್ತು.
ನ್ಯಾಯಾಲಯಕ್ಕೆ ಹಾಜರಾಗದೇ ಪೊಲೀಸರಿಗೂ ಸಿಗದೇ ತಪ್ಪಿಸಿಕೊಂಡು ಓಡಾಡಿಕೊಂಡಿದ್ದ ಆರೋಪಿಯನ್ನು ಈ ದಿನ ಬೆಳಗ್ಗೆ 11 ಗಂಟೆ ಸುಮಾರಿಗೆ ಸದಾಶಿವಗಡದ ರಾಜಕೇನಿಭಾಗದಲ್ಲಿ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಾನ್ಯ ಕಾರವಾರ ಉಪವಿಭಾಗದ ಡಿ ವೈ ಎಸ್ ಪಿ ವೆಲೆಂಟೈನ್ ಡಿಸೋಜ ಸೂಚನೆಯಂತೆ, ಕಾರವಾರ ನಗರ ಠಾಣೆ ಪೊಲೀಸ್ ನಿರೀಕ್ಷಕರು ರಮೇಶ್ ಹೂಗಾರ್ ಕಾರ್ಯತಂತ್ರದಲ್ಲಿ, ಪಿಎಸ್ಐ ವಿಶ್ವನಾಥ ನಿಂಗೊಳ್ಳಿ ನೇತೃತ್ವದ ತಂಡದಲ್ಲಿ ಸಿಬ್ಬಂದಿಗಳಾದ ಸೂರಜ್ ಕೊಠಾರಕರ್, ರಾಜೇಶ್ ನಾಯಕ್, ಗಿರೀಶಯ್ಯ, ವಿಕಾಸ್ ನಾಂದ್ರೆ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Governament Hospital: ತುರ್ತು ಸಂದರ್ಭದಲ್ಲಿ ಸಿಗದ ಆಸ್ಪತ್ರೆ ಸಿಬ್ಬಂದಿಗಳು… ಆಕ್ರೋಶ

Advertisement

Udayavani is now on Telegram. Click here to join our channel and stay updated with the latest news.

Next