Advertisement

Hanur ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪಿ ಬಂಧನ

07:53 PM Aug 27, 2023 | Team Udayavani |

ಹನೂರು: ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ರಾಮಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಹನೂರು ತಾಲೂಕಿನ ವೈಶಂಪಾಳ್ಯ ಗ್ರಾಮದ ಮುರುಗೇಶ್ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿರುವುದಾಗಿ ರಾಮಾಪುರ ಪೊಲೀಸರಿಗೆ ಮಾಹಿತಿ ದೊರೆತಿದೆ.

ಕೂಡಲೇ ಕರ‍್ಯಪ್ರವೃತ್ತರಾದ ಪೊಲೀಸರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿಸಾಹು ಮತ್ತು ಡಿವೈಎಸ್ಪಿ ಸೋಮೇಗೌಡ ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಆರೋಪಿಯನ್ನು ಹೊಸದೊಡ್ಡಿ ಗ್ರಾಮದ ಬಸ್ ನಿಲ್ದಾಣದ ಸಮೀಪ ವಶಕ್ಕೆ ಪಡೆದು ಪರಿಶೀಲಿಸಿದಾಗ 800 ಗ್ರಾಂ ಒಣಗಾಂಜಾ ಪತ್ತೆಯಾಗಿದೆ. ಕೂಡಲೇ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ದಾಳಿಯಲ್ಲಿ ರಾಮಾಪುರು ಸಿಪಿಐ ಸಂತೋಷ್ ಕಶ್ಯಪ್, ಮುಖ್ಯಪೇದೆಗಳಾದ ಸಿದ್ದೇಶ್, ಲಿಯಾಖತ್ ಅಲಿ ಖಾನ್, ಬಿರಾದರ್ ಇನ್ನಿತರರು ಭಾಗವಹಿಸಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next