Advertisement

ಅತ್ಯಾಚಾರ ಸಂತ್ರಸ್ತೆಗೆ ಬಾಳು ಕೊಟ್ಟ ಯುವಕನ ಖುಲಾಸೆ

04:05 PM Aug 25, 2022 | Team Udayavani |

ಬೆಂಗಳೂರು: ಅಪ್ತಾಪೆ¤ಯನ್ನು ಅಪಹರಿಸಿ ಅತ್ಯಾಚಾರ ನಡೆಸಿ ಬಳಿಕ ಪ್ರಾಪ್ತ ವಯಸ್ಸಿಗೆ ಬಂದ ಮೇಲೆ ಆಕೆಯನ್ನೇ ಮದುವೆಯಾದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಸಲ್ಲಿಸಲಾಗಿದ್ದ ದೋಷಾರೋಪ ಪಟ್ಟಿ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

Advertisement

ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರದ ಮಾಡಿದ ಆರೋಪ ಸಂಬಂಧ ತನ್ನ ವಿರುದ್ಧ ಪೊಲೀಸರು ದಾಖಲಿಸಿರುವ ದೋಷಾರೋಪ ಪಟ್ಟಿ ಮತ್ತು ಪ್ರಕರಣ ಕುರಿತ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ 23 ವರ್ಷದ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

17 ವರ್ಷದ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪ ಅರ್ಜಿದಾರ ಆರೋಪಿ ಮೇಲಿದೆ. ಆದರೆ, ಅರ್ಜಿದಾರ ಮತ್ತು ಸಂತ್ರಸ್ತೆ ಪರಸ್ಪರ ಪ್ರೀತಿಸುತ್ತಿದ್ದರು. ಸಂತ್ರಸ್ತೆಗೆ 18 ವರ್ಷ ತುಂಬಿದ ಮೇಲೆ ಆಕೆ ಆರೋಪಿಯನ್ನು ಸ್ವಇಚ್ಛೆ ಮೇರೆಗೆ ಮದುವೆಯಾಗಿದ್ದಾರೆ. ಮದುವೆ ನಂತರ ಒಂದು ವರ್ಷದ ಬಳಿಕ ದಂಪತಿಗೆ ಮಗು ಜನಿಸಿದೆ.

ಸದ್ಯ ಆಕೆ ಅರ್ಜಿದಾರನೊಂದಿಗೆ ವಾಸವಿದ್ದಾರೆ. ಇಂತಹ ಸಂದರ್ಭದಲ್ಲಿ ಆರೋಪಿ ವಿರುದ್ಧದ ಪ್ರಕರಣ ಮುಂದುವರಿಯವುದು ನ್ಯಾಯಸಮ್ಮತವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ, ಅರ್ಜಿದಾರನ ವಿರುದ್ಧದ ಅಧೀನ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದ್ದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಿ ಆದೇಶಿಸಿದೆ.

ಆರೋಪಿ ಹಾಗೂ ತಾನು ಸಮ್ಮತಿಯಿಂದಲೇ ಲೈಂಗಿಕ ಸಂಪರ್ಕ ಬೆಳಸಿರುವುದಾಗಿ ಸಂತ್ರಸ್ತೆಯೇ 2019ರ ಅಕ್ಟೋಬರ್‌ನಲ್ಲಿ ವಿಚಾರಣಾ ನ್ಯಾಯಾಲಯದ ಮುಂದೆ ಸ್ವಯಂ ಪ್ರೇರಿತ ಹೇಳಿಕೆ ನೀಡಿದ್ದಾರೆ. 2020ರ ಮಾರ್ಚ್‌ ನಲ್ಲಿ ಸಂತ್ರಸ್ತೆಗೆ 18 ವರ್ಷದ ತುಂಬಿದೆ. 2020ರ ಜೂನ್‌ ನಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿರುವ ಸಂತ್ರಸ್ತೆ, ತಾನು ಹಾಗೂ ಅರ್ಜಿದಾರ ಪರಸ್ಪರ ಪ್ರೀತಿಸುತ್ತಿದ್ದೇವು. ಸಮ್ಮತಿಯಿಂದಲೇ ಲೈಂಗಿಕ ಸಂಪರ್ಕ ಬೆಳೆಸಿದೆವು ಎಂದು ಹೇಳಿಕೆ ನೀಡಿದ್ದರು. ಅದನ್ನು ಆಧರಿಸಿಯೇ ವಿಚಾರಣಾ ನ್ಯಾಯಾಲಯ ಆರೋಪಿಗೆ ಜಾಮೀನು ನೀಡಿತ್ತು ಎಂದು ಆದೇಶದಲ್ಲಿ ತಿಳಿಸಿದೆ.

Advertisement

ಅಲ್ಲದೇ, ಸಂತ್ರಸ್ತೆಯು 2020ರ ಅಕ್ಟೋಬರ್‌ ನಲ್ಲಿ ಆರೋಪಿಯನ್ನು ಮದುವೆಯಾಗಿದ್ದಾರೆ. ಅದೇ ದಿನ ಅವರ ಮದುವೆ ನೋಂದಣಿಯಾಗಿದೆ. 2021ರ ಡಿಸೆಂಬರ್‌ನಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿದೆ. ಹಾಗಾಗಿ, ಅರ್ಜಿದಾರನ ವಿರುದ್ಧದ ಕ್ರಿಮಿನಲ್‌ ಪ್ರಕರಣವನ್ನು ಮುಂದುವರಿಸಿವುದು ಅರ್ಥಹೀನ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್‌, ಅರ್ಜಿದಾರನ ವಿರುದ್ಧದ ಅಪಹರಣ, ಅತ್ಯಾಚಾರ ಮತ್ತು ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ದೋಷಾರೋಪ ಪಟ್ಟಿ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಆದೇಶಿಸಿದೆ.

ಸಂತ್ರಸ್ತೆಯ ತಂದೆ ತನ್ನ 17 ವರ್ಷದ ಪುತ್ರಿ ನಾಪತ್ತೆಯಾಗಿದ್ದಾಳೆ ಎಂದು ತಿಳಿಸಿ 2019ರ ಮಾರ್ಚ್‌ ನಲ್ಲಿ ಬನ್ನೇರುಘಟ್ಟ ಠಾಣಾ ಪೋಲೀಸರಿಗೆ ದೂರು ದಾಖಲಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು, ಅರ್ಜಿದಾರನ ವಿರುದ್ಧ ಅಪಹರಣ, ಅತ್ಯಾಚಾರ ಮತ್ತು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಪೋಕ್ಸೋ ಕಾಯ್ದೆಯಡಿ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದನ್ನು ರದ್ದುಪಡಿಸುವಂತೆ ಕೋರಿ 2022ರ ಜುಲೈನಲ್ಲಿ ಅರ್ಜಿದಾರ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next