Advertisement

ಪಕ್ಕದ ಮನೆ ಗೋಡೆ ಕುಸಿದುತಾಯಿ, ಇಬ್ಬರು ಮಕ್ಕಳ ಸಾವು

12:04 PM Aug 17, 2018 | Team Udayavani |

ಆಳಂದ: ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಗೆ ಪಕ್ಕದ ಮನೆ ಗೋಡೆ ಕುಸಿದ ಪರಿಣಾಮ ಇನ್ನೊಂದು ಮನೆಯಲ್ಲಿದ್ದ ಒಂದೇ ಕುಟುಂಬದ ತಾಯಿ ಹಾಗೂ ಇಬ್ಬರು ಹೆಣ್ಣುಮಕ್ಕಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ನಿಂಬರಗಾ ವಲಯದ ಹಿತ್ತಲಶಿರೂರ ಗ್ರಾಮದಲ್ಲಿ ಸಂಭವಿಸಿದೆ.

Advertisement

ಗ್ರಾಮದ ಲಕ್ಷ್ಮೀಬಾಯಿ ಪ್ರಭು ವಡ್ಡರ (30), ಅಂಬಿಕಾ ಪ್ರಭು (11), ಯಲ್ಲಮ್ಮ ಪ್ರಭು ವಡ್ಡರ (9) ಮೃತ ಲಕ್ಷ್ಮೀಬಾಯಿ ಪತಿ ಪ್ರಭು ವಡ್ಡರ ಅವರಿಗೆ ತೀವ್ರವಾಗಿ ಗಾಯಗಳಾದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಪ್ರಭು ವಡ್ಡರ ಅವರ 8 ವರ್ಷದ ಮಗ ಯಲ್ಲಪ್ಪ ತನ್ನ ತಾತನ ಬಳಿ ಮಲಗಿದ್ದರಿಂದ ದುರ್ಘ‌ಟನೆಯಿಂದ ಪಾರಾಗಿದ್ದಾನೆ.

ಗ್ರಾಮದ ಭೀಮಶಾ ಎನ್ನುವರಿಗೆ ಸೇರಿದ ಮನೆಯ ಗೋಡೆ ಕುಸಿದು ಪಕ್ಕದ ಮನೆಯ ಲಕ್ಷ್ಮೀಬಾಯಿ ಅವರ ಮನೆ ಮೇಲೆ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ. ನಿಂಬರ್ಗಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಶಾಸಕ ಸುಭಾಷ ಗುತ್ತೇದಾರ ಭೇಟಿ ನೀಡಿ ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪದ ಅಡಿಯಲ್ಲಿ 4 ಲಕ್ಷ ರೂ. ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿ ಧಿಯಡಿ ಒಂದು ಲಕ್ಷ ರೂ. ಸೇರಿ 5 ಲಕ್ಷ ರೂ. ಪರಿಹಾರ ದೊರಕಿಸಲಾಗುವುದು ಎಂದು ಭರವಸೆ ನೀಡಿದರು. ತಹಶೀಲ್ದಾರ್‌ ಬಸವರಾಜ ಎಂ. ಬೆಣ್ಣೆಶಿರೂರ, ನಿಂಬರಗಾ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next