Advertisement
ಹೊಸಪೇಟೆಯ ಹಂಪಿ ಕನ್ನಡ ವಿವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ಜಾರಕಿಹೊಳಿ ಸಹೋದರರು ಎಲ್ಲರೂ ಒಂದೇ. ಬೇರೆ ಬೇರೆಯಲ್ಲ. ಹಿಂದೆ ಸಿದ್ದರಾಮಯ್ಯನವರೇ ರಮೇಶ ಜಾರಕಿಹೊಳಿ ಅವರನ್ನು ಸಚಿವರನ್ನಾಗಿ ಮಾಡಿದ್ದರು. ಇದೀಗ ಅವರನ್ನು ತೆಗೆದು ಸತೀಶ್ ಜಾರಕಿಹೊಳಿ ಅವರನ್ನು ಸಚಿವರನ್ನಾಗಿ ಮಾಡಿದ್ದಾರೆ. ಜಾರಕಿಹೊಳಿ ಸಹೋದರರು ಸಿದ್ದರಾಮಯ್ಯ ಹೇಳಿದಂತೆ ಕೇಳುತ್ತಾರೆ. ರಮೇಶ ಜಾರಕಿಹೊಳಿಯವರಿಗೆ ಸಿಟ್ಟಿದೆ. ಅದನ್ನು ಶಮನ ಮಾಡುವುದಾಗಿ ಸಿದ್ದರಾಮಯ್ಯನವರೇ ಹೇಳಿದ್ದಾರೆ ಎಂದರು.