Advertisement

ಕಾನೂನು ವ್ಯಾಪ್ತಿಯಲ್ಲೇ ಉತ್ತರ: ಸಿಎಂ

08:54 AM Nov 17, 2018 | Team Udayavani |

ಮಂಗಳೂರು: ಸಚಿವ ಡಿ.ಕೆ. ಶಿವಕುಮಾರ್‌ಗೆ ಜಾರಿ ನಿರ್ದೇಶನಾಲಯ (ಇಡಿ) ನೀಡಿದ ನೋಟಿಸ್‌ಗೆ ಕಾನೂನು ವ್ಯಾಪ್ತಿಯಲ್ಲೇ ಉತ್ತರ ನೀಡುತ್ತಾರೆ. ಗಾಬರಿ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಿರು ವುದನ್ನು ದ್ವೇಷದ ರಾಜ ಕಾರಣ ಎನ್ನುವುದು ಹೇಗೆ ಎಂದು ಪ್ರಶ್ನಿಸಿದರು.

Advertisement

ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿ ಸಲು ಸರಕಾರ ಬದ್ಧವಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು. ವಿಧಾನ ಪರಿಷತ್‌ ಸದಸ್ಯ ಭೋಜೇಗೌಡ, ಜೆಡಿಎಸ್‌ ಜಿಲ್ಲಾಧ್ಯಕ್ಷ ಮಹಮ್ಮದ್‌ ಕುಂಞಿ, ಕಾರ್ಯಾಧ್ಯಕ್ಷ ಎಂ.ಬಿ. ಸದಾಶಿವ, ರಾಜ್ಯ ಅಲ್ಪಸಂಖ್ಯಾಕ ಘಟಕದ ಉಪಾಧ್ಯಕ್ಷ ಎಂ.ಕೆ. ಖಾದರ್‌, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ಮಂಗಳೂರು ಕ್ಷೇತ್ರಾಧ್ಯಕ್ಷ ವಸಂತ ಪೂಜಾರಿ ಉಪಸ್ಥಿತರಿದ್ದರು.

ದುರುದ್ದೇಶ ಇಲ್ಲ: ವಿಶ್ವನಾಥ್‌ 
ಜಾರಿ ನಿರ್ದೇಶನಾಲಯವು ಸಚಿವ ಡಿಕೆಶಿ ಅವರಿಗೆ ನೀಡಿದ ನೋಟಿಸ್‌ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂಬುದರಲ್ಲಿ ಅರ್ಥವಿಲ್ಲ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌. ವಿಶ್ವನಾಥ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟಿಸ್‌ಗಳು ಬರುತ್ತವೆ, ಹೋಗುತ್ತವೆ. ಅವುಗಳನ್ನು ಕಾನೂನು ಪ್ರಕಾರ ಎದುರಿಸಿದರಾಯಿತು. ರಾಜಕೀಯ ದುರುದ್ದೇಶ ಎನ್ನುವುದೇಕೆ ಎಂದು ಪ್ರಶ್ನಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next