Advertisement

ಜೇಟ್ಲಿ ವಿರುದ್ಧದ ಅರ್ಜಿ ವಜಾ

06:00 AM Dec 08, 2018 | |

ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ವಿರುದ್ಧ ತನಿಖೆಗೆ ಅನುಮತಿ ಕೋರಿ ಎಂ.ಎಲ್‌. ಶರ್ಮಾ ಎಂಬ ವಕೀಲರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್‌ ತಿರಸ್ಕರಿ ಸಿದೆ. ಜತೆಗೆ, ಅವರಿಗೆ 50,000 ರೂ. ದಂಡವನ್ನೂ ವಿಧಿಸಿದೆ. ಅಲ್ಲದೆ, ದಂಡದ ಮೊತ್ತ ಪಾವತಿಸುವವರೆಗೂ ಯಾವುದೇ ಪಿಐಎಲ್‌ ಸಲ್ಲಿಕೆಗೂ ಅವರಿಗೆ ಅವಕಾಶ ಕೊಡಬೇಡಿ ಎಂದು ರಿಜಿಸ್ಟ್ರಾರ್‌ಗೆ ಆದೇಶಿಸಿದೆ. ಕಾರ್ಪೊ ರೇಟ್‌ ಕಂಪನಿಗಳಿಗೆ ಅನುಕೂಲ ಮಾಡಿಕೊಡಲೆಂದು ಅವರು ಆರ್‌ಬಿಐ ಮೀಸಲು ನಿಧಿಯನ್ನು ದೋಚಲು ಹೊರಟಿದ್ದಾರೆಂದು ಆರೋಪಿಸಿ, ಈ ಬಗ್ಗೆ ತನಿಖೆ ನಡೆಸಲು ಆದೇಶಿಸಬೇಕೆಂದು ಕೋರಿ ಪಿಐಎಲ್‌ ಸಲ್ಲಿಸಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next