Advertisement

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

11:18 PM Sep 24, 2021 | Team Udayavani |

ಧಾರವಾಡ : ತಿಂಡಿ, ಹಣದ ಆಮಿಷವೊಡ್ಡಿ ದಡ್ಡಿ ಕಮಲಾಪೂರದ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಉಪನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Advertisement

ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ಶರಣಪ್ಪ ಫಕ್ಕೀರಪ್ಪ ತಳವಾರ (25) ಬಂಽತ ಆರೋಪಿ. ಈತ ಬಾಲಕಿಗೆ ಎಗ್ರೈಸ್, ಗೋಬಿ  ಮಂಚೂರಿಯಂತಹ ತಿಂಡಿ ಹಾಗೂ ಹಣದ ಆಸೆ ತೋರಿಸಿ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದಲ್ಲದೇ ಹಣಕ್ಕಾಗಿ ಬಾಲಕಿ ಬಿಕ್ಷಾಟನೆ ತೊಡಗಿದ್ದ ಬಾಲಕಿಯ ಮೇಲೆ ದೌರ್ಜನ್ಯ ಎಸಗುವಾಗ ಸಿಕ್ಕು ಬಿದ್ದು, ಧರ್ಮದೇಟು ಸಿಕ್ಕಿತ್ತು.

ಈ ಮಾಹಿತಿ ಆಧರಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಬಾಲಕಿಯನ್ನು ಪತ್ತೆ ಹಚ್ಚಿ ಆಪ್ತ ಸಮಾಲೋಚನೆ ಕೈಗೊಂಡಾಗ, ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಆಗಿದ್ದು ಬೆಳಕಿಗೆ ಬಂದಿತ್ತು. ಈ ಕುರಿತಂತೆ ಜಿಲ್ಲಾ ಮಕ್ಕಳ ರಕ್ಷಣಾಽಕಾರಿ ಡಾ|ಕಮಲಾ ಬಲೂರ ಉಪನಗರ ಠಾಣೆಗೆ ದೂರು ನೀಡಿ, ಲೈಂಗಿಕ ದೌರ್ಜನ್ಯ ಎಸಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದರು.

ಈ ದೂರಿನ ಅನ್ವಯ ಉಪನಗರ ಠಾಣೆ ಪೊಲೀಸರು, ಮಾಹಿ ಕಲೆ ಹಾಕಿ ಗುರುವಾರವೇ ಅಣ್ಣಿಗೇರಿಯ ಹಳ್ಳಿಕೇರಿಗೆ ಭೇಟಿ ನೀಡಿ, ಯುವಕ ಶರಣಪ್ಪನನ್ನು ಬಂಧಿಸಿದ್ದಾರೆ. ಇದಲ್ಲದೇ ಆರೋಪಿಯ ವಿರುದ್ದ ಪೋಸ್ಕೋ ಕಾಯ್ದೆಯಡಿ  ದೂರು ದಾಖಲಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next