Advertisement

ಶ್ರೀಗಳ ಮೇಲಿನ ಹಲ್ಲೆ ಖಂಡನೆ

11:53 AM Jan 19, 2018 | Team Udayavani |

ಮೈಸೂರು: ಶ್ರೀ ನಿಜಶರಣ ಅಂಬಿಗ ಪೀಠದ ಚೌಡಯ್ಯನವರ ಗುರುಪೀಠದ ಶ್ರೀ ಶಾಂತ ಭೀಷ್ಮ ಚೌಡಯ್ಯ ಸ್ವಾಮೀಜಿ ಅವರನ್ನು ಅವಮಾನಿಸಿ, ಹಲ್ಲೆ ಮಾಡಿರುವುದನ್ನು ಖಂಡಿಸಿ ಮೈಸೂರು ಜಿಲ್ಲಾ ಗಂಗಾಮತಸ್ಥರ ಸಂಘದವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Advertisement

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯ ಮಂಟಪ ಗಂಗಾಮತ ಸಮಾಜದ ಬಂಧುಗಳ ಶ್ರದ್ಧಾ ಕೇಂದ್ರವಾಗಿದೆ. ಆದರೆ, ಜ.14ರಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅವರ ಗುರುಪೀಠದ ಶ್ರೀ ಶಾಂತ ಭೀಷ್ಮ ಚೌಡಯ್ಯ ಸ್ವಾಮೀಜಿಗಳು ಅಂಬಿಗರ ಚೌಡಯ್ಯ ಅವರ ಐಕ್ಯ ಮಂಟಪಕ್ಕೆ ಪೂಜೆ ಸಲ್ಲಿಸಲು ತೆರಳಿದಾಗ

ಚೌಡಯ್ಯ ದಾನಪುರದ ಶ್ರೀ ಚಿತ್ರ ಶೇಖರಚಾರ್ಯ ಸ್ವಾಮೀಜಿ ತಮ್ಮ ಬೆಂಬಲಿಗರೊಂದಿಗೆ ಭೀಷ್ಮ ಚೌಡಯ್ಯ ಸ್ವಾಮೀಜಿ ಮೇಲೆ ಹಲ್ಲೆ ನಡೆಸಿ, ಕಾರನ್ನು ಜಖಂಗೊಳಿಸಿದ್ದಾರೆ. ಅಲ್ಲದೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯ ಮಂಟಪದ ಮೇಲೆ ಕಾಲಿಟ್ಟು ಗಂಗಾಮತಸ್ಥರ ಧಾರ್ಮಿಕ ಬಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ.

ಹೀಗಾಗಿ ಶ್ರೀ ಚಿತ್ರಶೇಖರಚಾರ್ಯ ಸ್ವಾಮೀಜಿ ಮತ್ತು ಬೆಂಬಲಿಗರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷರಾದ ಪ್ರೊ.ಎಚ್‌.ಎಂ.ವಸಂತಮ್ಮ, ಪ್ರಧಾನ ಕಾರ್ಯದರ್ಶಿ ಆರ್‌.ರಾಜು, ಖಜಾಂಚಿ ನಾರಾಯಣ ಲೋಲಪ್ಪ ಮತ್ತಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next