Advertisement
ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ದಿನನಿತ್ಯ ಬೆಳಗ್ಗೆ ಮತ್ತು ಸಂಜೆ ನಗರದ ಸುಮಾರು ಒಂದು ಸಾವಿರ ಜನರು ವಾಯುವಿಹಾರ ಮತ್ತು ವಿವಿಧ ರೀತಿಯ ದೈಹಿಕ ವ್ಯಾಯಾಮಗಳನ್ನು ಮಾಡುತ್ತಾರೆ. ಶಾಲಾ ಮಕ್ಕಳು ಹಾಗೂ ಯುವಕರು ಕ್ರಿಕೆಟ್, ವಾಲಿಬಾಲ್ ಇತರೆ ಆಟಗಳ ಅಭ್ಯಾಸ ಮಾಡುತ್ತಾರೆ. ಆದರೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ 5.60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ 200 ಮೀಟರ್ ಟ್ರ್ಯಾಕ್ ಸಂಪೂರ್ಣ ಕಳಪೆಯಾಗಿದೆ ಎಂದು ಆರೋಪಿಸಿದ್ದಾರೆ.
Related Articles
Advertisement
5.18 ಎಕರೆ ಪ್ರದೇಶದಲ್ಲಿ ಆಟದ ಮೈದಾನವಿದ್ದು, ಅದರಲ್ಲಿ ಸುಮಾರು 1.18 ಗುಂಟೆ ಒತ್ತುವರಿ ಆಗಿರುವುದರಿಂದ ಕೂಡಲೇ ಜಿಲ್ಲಾಧಿಕಾರಿಗಳು ಸರ್ವೆ ಮಾಡಿಸಿ ಒತ್ತುವರಿ ಜಾಗವನ್ನು ತೆರವುಗೊಳಿಸಬೇಕು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಯ ತಪ್ಪುಗಳಿಂದ ಕ್ರೀಡಾಪಟುಗಳು ಸಮಸ್ಯೆ ಎದುರಿಸುವಂತಾಗಿದೆ ಎಂದು ಮತ್ತೂಬ್ಬ ಕ್ರೀಡಾಪಟು ಮುನಿರಾಜು ಬೇಸರ ವ್ಯಕ್ತಪಡಿಸಿದರು.
ಅಧಿಕಾರಿ ಅಮಾನತು ಮಾಡಿ: ಸಾಕಷ್ಟು ವರ್ಷಗಳಿಂದ ಯುವಕರು ಕ್ರಿಕೆಟ್ ಮತ್ತಿತರ ಪಂದ್ಯಾವಳಿಗಳನ್ನು ಆಯೋಜಿಸುತ್ತಿದ್ದರು. ಕ್ರಿಕೆಟ್ ಆಡುವ ಪಿಚ್ ಅನ್ನೇ ಹಾಳು ಮಾಡಿದ್ದಾರೆ. ಇಂತಹ ಕಾಮಗಾರಿಗಳನ್ನು ಮಾಡುವಾಗ ಜನಪ್ರತಿನಿಧಿಗಳ ಗಮನಕ್ಕೆ ತಂದು ಮುಂದಿನ ಕೆಲಸ ಮಾಡಬೇಕು. ಕಳಪೆ ಕಾಮಗಾರಿ ಹಾಗೂ ಸರ್ಕಾರದ ಹಣ ದುರುಪಯೋಗವಾಗಿದೆ. ಆದ್ದರಿಂದ, ಈ ಕುಡಲೇ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಬೇಕು. ಗುಣಮಟ್ಟದ ಟ್ರ್ಯಾಕ್ ನಿರ್ಮಾಣ ಮಾಡಬೇಕು. ತಾಲೂಕಿನ ವಿಜಯಪುರ ರಸ್ತೆಯಲ್ಲಿರುವ ತಾಲೂಕು ಕ್ರೀಡಾಂಗಣದ ಮಾದರಿಯಲ್ಲಿ ಮಿನಿ ಕ್ರೀಡಾಂಗಣವನ್ನು ನಿರ್ಮಿಸಬೇಕೆಂದು ಇನ್ನೊಬ್ಬ ಕ್ರೀಡಾಪಟು ಸುನೀಲ್ ಆಗ್ರಹಿಸಿದರು.
200 ಮೀ.ಟ್ರ್ಯಾಕ್ ನಿರ್ಮಾಣ ಮಾಡಿರುವುದು ಸರಿಯಾಗಿಲ್ಲ. ಹಾಗಾಗಿ, ಗುತ್ತಿಗೆದಾರರಿಗೆ ಪತ್ರ ಬರೆದು ಗುಣಮಟ್ಟದ ಟ್ರ್ಯಾಕ್ ನಿರ್ಮಾಣ ಮಾಡುವಂತೆ ಸೂಚಿಸಲಾಗಿದೆ. ಇಲ್ಲವಾದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಲಾಗಿದೆ. ಗುತ್ತಿಗೆದಾರರು ಸರಿಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಅದಕ್ಕಾಗಿ ನಾವು ಕಾಯಬೇಕಾಗಿದೆ. -ದೇವಿಕಾ ರಾಣಿ, ಸಹಾಯಕ ನಿರ್ದೇಶಕಿ, ಜಿಲ್ಲಾ ಯುವ ಸಬಲೀಕರಣ, ಕ್ರೀಡಾ ಇಲಾಖೆ