Advertisement
ಬಿಜೆಪಿ ರಾಜ್ಯ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪಿ.ಸಿ.ಮೋಹನ್, ಒಂದು ಲೀಟರ್ ಪೆಟ್ರೋಲ್ ದರದಲ್ಲಿ ರಾಜ್ಯ ಸರ್ಕಾರ 24.98 ರೂ.ಪಡೆದರೆ, ಕೇಂದ್ರ ಸರ್ಕಾರಕ್ಕೆ ಕೇವಲ 6.66 ರೂ.ಮಾತ್ರ ಸಿಗಲಿದೆ. ಹೀಗಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೇರಿ ಇತರ ಪಕ್ಷಗಳು ಬಂದ್ಗೆ ಕರೆ ನೀಡಿರುವುದು ನ್ಯಾಯೋಚಿತವಲ್ಲ ಎಂದರು.
Related Articles
ಕೂಡಾ ಪೆಟ್ರೋಲ್, ಡೀಸೆಲ್ನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ. ಜಿಎಸ್ಟಿ ಜಾರಿಗೂ ಮುನ್ನ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯ ಹಣಕಾಸು ಸಚಿವರ ಸಭೆ ಕರೆದಾಗ 15ಕ್ಕೂ ಹೆಚ್ಚು ಮುಖ್ಯಮಂತ್ರಿಗಳು, ಹಣಕಾಸು ಸಚಿವರು ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ಒಪ್ಪಲಿಲ್ಲ. ಹಾಗಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ದೂರಲಾಗುತ್ತಿದೆ ಎಂದು ಆರೋಪಿಸಿದರು.
Advertisement