Advertisement

ಕೇಂದ್ರ ಜನರ ಮೂಲ ಸ್ವಾತಂತ್ರ್ಯ ಕಿತ್ತುಕೊಳುತ್ತಿದೆ

12:58 PM Aug 16, 2018 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರ ದೇಶದ ಜನರ ಮೂಲಭೂತ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ನಡೆದ 72 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ದೇಶದ ಮೇಲೆ ಆತಂಕದ ಛಾಯೆ ಕಾಣುತ್ತಿದೆ. ದೇಶದ ಮೂಲ ಸಿದ್ದಾಂತಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. 125 ಕೋಟಿ ಜನರಿಗೆ ಮೋದಿ ಪ್ರಧಾನಿಯಾಗಬೇಕಿತ್ತು. ಆದರೆ, ಕೇವಲ ಕೆಲವೇ ವರ್ಗಕ್ಕೆ ಅವರು ಆದ್ಯತೆ ನೀಡುತ್ತಿದ್ದು, ಅವರ ಧೋರಣೆ ಆತಂಕ ಉಂಟು ಮಾಡುವಂತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಜನತೆಯ ದೇಶ ಪ್ರೇಮವನ್ನು ಕಿತ್ತುಕೊಳ್ಳುತ್ತಿದೆ. ದಲಿತರು ಮತ್ತು ಮಹಿಳೆಯರ ಮೇಲೆ ನಿರಂತರ ಹಲ್ಲೆ ನಡೆಯುತ್ತಿದೆ. ದೇಶದ ಮೌಲ್ಯ ಮತ್ತು ಸಿದ್ಧಾಂತಗಳ ವಿರುದ್ಧ ಕೇಂದ್ರ ಸರ್ಕಾರ ನಡೆಯುತ್ತಿದೆ. ದೇಶವನ್ನು ಸರಿಯಾದ ದಾರಿಯಲ್ಲಿ ತೆಗೆದುಕೊಂಡು ಹೋಗಬೇಕಿದೆ. ಅದಕ್ಕಾಗಿ ದುಷ್ಟ ಶಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಹೋರಾಟ ಮಾಡಬೇಕಿದೆ. ಹೀಗಾಗಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮತ್ತೆ ಬಲಿಷ್ಠಗೊಳಿಸಬೇಕಿದೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next