Advertisement

ಉತ್ತಮ ಬಾಂಧವ್ಯ ಹೊಂದಿದ್ದ ರಾಣೆ

12:21 PM Jul 24, 2017 | Team Udayavani |

ಹುಬ್ಬಳ್ಳಿ: ಎಲ್ಲ ಪಕ್ಷಗಳ ರಾಜಕಾರಣಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ ಪೊಲೀಸ್‌ ಆಯುಕ್ತ ಪಾಂಡುರಂಗ ರಾಣೆ ಅವರು ಅವಳಿ ನಗರದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. 

Advertisement

ಹು-ಧಾ ಪೊಲೀಸ್‌ ಆಯುಕ್ತ ಪಾಂಡುರಂಗ ರಾಣೆ ಸೇವಾ ನಿವೃತ್ತಿ ಹೊಂದಲಿರುವುದರಿಂದ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮೀಶ°ರೇಟ್‌ ಗೋಕುಲ ಗಾರ್ಡನ್‌ನಲ್ಲಿ ರವಿವಾರ ಸಂಜೆ ಆಯೋಜಿಸಿದ್ದ ಸ್ನೇಹಕೂಟದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಳಸಾ-ಬಂಡೂರಿ ಹೋರಾಟ ತೀವ್ರ ಗತಿಯಲ್ಲಿ ನಡೆಯಿತು.

ಹಲವೆಡೆ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಹಲ್ಲೆ ನಡೆಯಿತು. ಆದರೆ ಹುಬ್ಬಳ್ಳಿಯಲ್ಲಿ ಹೋರಾಟಗಳು ನಡೆದರೂ ಶಾಂತಿ ಕದಡದಂತೆ ಕ್ರಮ ಕೈಗೊಂಡರು ಎಂದರು. ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಹುಬ್ಬಳ್ಳಿ- ಧಾರವಾಡ ಕಮೀಶ°ರೇಟ್‌ ಆರಂಭಗೊಂಡ ನಂತರ ಮೊದಲ ಬಾರಿ ಒಬ್ಬ ಆಯುಕ್ತರು ಸೇವಾ ನಿವೃತ್ತಿ ಹೊಂದುತ್ತಿರುವ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು. 

ಅವಳಿ ನಗರದಲ್ಲಿ ಶಾಂತಿ ಸುವ್ಯವಸ್ಥೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಅವಳಿ ನಗರದಲ್ಲಿ  ಇದೇ ಪರಂಪರೆ ಮುಂದುವರೆಯಬೇಕು. ಅಧಿಕಾರಿಗಳು ಅವರ ಮಾರ್ಗದರ್ಶನದಲ್ಲಿ ಸಾಗಬೇಕು. ಒಬ್ಬ ಅಧಿಕಾರಿ ಎಲ್ಲರ ಪ್ರೀತಿಗಳಿಸುವುದು ಕಷ್ಟಕರ. ಪಾಂಡುರಂಗ ರಾಣೆ  ಅವಳಿ ನಗರದ ಎಲ್ಲ ಜನರ ಪ್ರೀತಿ ಗಳಿಸಿದರು.

ಇಂಥ ಅಧಿಕಾರಿಗಳ ಸಂಖ್ಯೆ ಹೆಚ್ಚಾಗಬೇಕೆಂದರು. ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಮಾತನಾಡಿ, ಅವಳಿ ನಗರದಲ್ಲಿ ಯಾವುದೇ ಕೋಮು ಗಲಭೆ ಘಟನೆ ನಡೆಯದಂತೆ ನೋಡಿಕೊಂಡ ಹಿರಿಮೆ ರಾಣೆ ಅವರಿಗೆ ಸಲ್ಲುತ್ತದೆ ಎಂದರು.

Advertisement

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ವಿಧಾನ ಪರಿಷತ್‌ ಸದಸ್ಯ ಡಾ| ವಿಜಯ ಸಂಕೇಶ್ವರ, ಮಾಜಿ ಸಂಸದ ಐ.ಜಿ. ಸನದಿ, ಮೋಹನ ಲಿಂಬಿಕಾಯಿ, ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ಸದಾನಂದ ಡಂಗನವರ, ಶಂಕ್ರಣ್ಣ ಮುನವಳ್ಳಿ, ರಮೇಶ ಪಾಟೀಲ, ಮೋತಿಲಾಲ್‌ ಕಬಾಡಿ ಮೊದಲಾದವರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next