Advertisement

ಸೇತುವೆ ನಿರ್ಮಾಣ ಗುಂಡಿಗೆ ಬಿದ್ದ ಬೈಕ್ ಸವಾರ: ಅವ್ಯವಸ್ಥೆಗೆ ಆಕ್ರೋಶ

05:24 AM Mar 14, 2019 | |

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಕಲ್ಲಾವು ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ತೆಗೆದ ಗುಂಡಿಗೆ ಬುಧವಾರ ರಾತ್ರಿ ಬೈಕ್ ಸವಾರರೊಬ್ಬರು ಬಿದ್ದಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. 

Advertisement

ಗಾಯಗೊಂಡ ಬೈಕ್ ಸವಾರ ಕಟಪಾಡಿ ಸಮೀಪದ ದಿನೇಶ್ ಶೆಟ್ಟಿ ಎಂದು ತಿಳಿದು ಬಂದಿದ್ದು, ತೀವ್ರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಟಪಾಡಿ ಸಮೀಪ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಹಳೆಯ ಸೇತುವೆ ಕೆಡವಿ ಹೊಸ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಆದರೆ ಇಲ್ಲಿ ಯಾವುದೇ ಸೂಚನಾ ಫಲಕ ಇಲ್ಲದೇ ಇರುವುದು ರಾತ್ರಿ ವೇಳೆಯ ಸವಾರರಿಗೆ ಗೊಂದಲ ಉಂಟು ಮಾಡುತ್ತಿದೆ. ಹಳೆಯ ಸೇತುವೆ ಕಡವಿದ ಜಾಗದಲ್ಲಿ 10-15 ಅಡಿ ಆಳದ ಗುಂಡಿ ನಿರ್ಮಾಣವಾಗಿದೆ. ಅದರಲ್ಲಿ ಕಬ್ಬಿಣದ ಸರಳುಗಳು, ಸಿಮೆಂಟ್ ತುಂಡುಗಳ ರಾಶಿ ಬಿದ್ದಿದೆ.  


ಬುಧವಾರ ರಾತ್ರಿ ನಡೆದ ಅವಘಡದಲ್ಲಿ ದಿನೇಶ್ ಶಟ್ಟಿ ಅವರ ಎದೆ ಗೂಡಿನ ಎಲುಬುಗಳು ಮುರಿದಿವೆ. ಸೇತುವೆ ನಿರ್ಮಾಣ ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next