Advertisement

ಸೇವಾಲಾಲರ ಜನ್ಮಸ್ಥಳ ಅಭಿವೃದ್ಧಿಗೆ ಶ್ರಮ

01:23 PM Feb 16, 2017 | Team Udayavani |

ನ್ಯಾಮತಿ: ಬಂಜಾರಾ ಸಮುದಾಯದ ಏಕೈಕ ಜಗದ್ಗುರು ಸಂತ ಸೇವಾಲಾಲ್‌ ಅವರ ಜನ್ಮಸ್ಥಳವನ್ನು ಪವಿತ್ರ ಯಾತ್ರಾ ಸ್ಥಳವನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದು ಜವಳಿ ಹಾಗೂ ಮುಜರಾಯಿ ಸಚಿವ ರುದ್ರಪ್ಪ ಎಂ. ಲಮಾಣಿ ಭರವಸೆ ನೀಡಿದರು.

Advertisement

ಸಮೀಪದ ಸೂರಗೊಂಡನಕೊಪ್ಪದಲ್ಲಿ ನಡೆದ ಸಂತ ಸೇವಾಲಾಲ್‌ ಅವರ 278ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 1 ಕೋಟಿ ಅನುದಾನ ನೀಡಿದ್ದರು.

ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು 12 ಕೋಟಿಗಿಂತ ಹೆಚ್ಚು ಅನುದಾನ ಬಿಡುಗಡೆ ಮಾಡಿದ್ದು, 13.5 ಎಕರೆ ಜಮೀನು ಮಂಜೂರಾತಿ ನೀಡಿದ್ದಾರೆ. ಈಗ ಬಯಲು ರಂಗಮಂದಿರ, ಗೆಸ್ಟ್‌ಹೌಸ್‌, ಮೂರು ಅಂತಸ್ತಿನ ಮಂದಿರ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದರು. ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ ಅಧ್ಯಕ್ಷತೆ ವಹಿಸಿದ್ದರು.

 ಇಂಧನ ಸಚಿವ ಡಿ.ಕೆ. ಶಿವಕುಮಾರ, ಶಿಕಾರಿಪುರ ಶಾಸಕ ಬಿ.ವೈ. ರಾಘವೇಂದ್ರ, ಕುಡಚಿ ಶಾಸಕ ಪಿ. ರಾಜೀವ್‌, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ದಾವಣಗೆರೆ ಜಿಪಂ ಅಧ್ಯಕ್ಷೆ ಉಮಾ ರಮೇಶ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷಿಬಾಯಿ ಮಾತನಾಡಿದರು. 

Advertisement

Udayavani is now on Telegram. Click here to join our channel and stay updated with the latest news.

Next