Advertisement
ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಯುವ ಸಬಲೀಕರಣ ಮತ್ತು ಕೀಡಾ ಇಲಾಖೆ ವತಿಯಿಂದ ನಗರದ ಜೆ.ಕೆ.ಮೈದಾನದಲ್ಲಿ ಗುರುವಾರ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ವಿವಿಧ ವಿಭಾಗದಲ್ಲಿ ನಡೆದ ಯುವಜನೋತ್ಸವಕ್ಕೆ ನಿರೀಕ್ಷಿತ ಮಟ್ಟದಲ್ಲಿ ವಿದ್ಯಾರ್ಥಿಗಳು, ಯುವಜನತೆ ಭಾಗವಹಿಸಿರಲಿಲ್ಲ.
Related Articles
Advertisement
ನೃತ್ಯ ಪ್ರದರ್ಶನ: ಜತೆಗೆ ಶಾಸ್ತ್ರೀಯ ನೃತ್ಯಗಳಾದ ಭರತ ನಾಟ್ಯ, ಒಡಿಶಾ, ಮಣಿಪುರಿ, ಕುಚುಪುಡಿ, ಕಥಕ್ ನೃತ್ಯದ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಇನ್ನು ಶಾಸ್ತ್ರೀಯ ನುಡಿಸುವ ವಿಭಾಗದಲ್ಲಿ ಸೀತಾರ್, ಕೊಳಲು, ತಬಲ, ವೀಣೆ, ಮದಂಗ, ಹಾರೊ¾àನಿಯಂ, ಗಿಟಾರ್ ವಾದನ ಮನರಂಜನೆ ಉಣಬಡಿಸಿತು.
ಕಾರ್ಯಕ್ರಮಕ್ಕೆ ಚಾಲನೆ: ಇದಕ್ಕೂ ಮುನ್ನ ಜಿಲ್ಲಾಮಟ್ಟದ ಯುವಜನೋತ್ಸವಕ್ಕೆ ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನಾ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸ್ಪರ್ಧೆಗಳಲ್ಲಿ ಹೆಣ್ಣು ಗಂಡು ಎಂಬ ಬೇಧವಿಲ್ಲದೇ ಸ್ಪರ್ಧಾ ಮನೋಭಾವದಿಂದ ಭಾಗವಹಿಸಬೇಕು. ಸ್ಪರ್ಧೆಯಲ್ಲಿ ಗೆಲ್ಲುವುದು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯವಾಗಲಿದೆ ಎಂದರು.
ಜಾನಪದ ವಿದ್ವಾಂಸ ಡಾ.ಪಿ.ಕೆ.ರಾಜಶೇಖರ್ ಮಾತನಾಡಿ, ಯುವಜನರಿಗೆ ಸ್ವಾಮಿ ವಿವೇಕಾನಂದರಿಂದಲೇ ವಿವೇಕ ತುಂಬ ಬೇಕಾಗಿದೆ. ವಿದ್ಯಾರ್ಥಿಗಳು, ಯುವಜನರು ಪದವಿ ಪಡೆದ ಮಾತ್ರಕ್ಕೆ ವಿದ್ಯಾವಂತರಾಗುವುದಿಲ್ಲ. ನೈತಿಕ ಮೌಲ್ಯಗಳೊಂದಿಗೆ, ತನ್ನ ಸುತ್ತಮುತ್ತಲಿನವರ ಬದುಕಿಗೆ ನೆರವಾದಾಗ ಮಾತ್ರ ವಿದ್ಯಾವಂತರಾಗುತ್ತಾರೆ.
ಸ್ವಾಮಿ ವಿವೇಕಾನಂದರು ದೇಶದ ಯುವಕರೇ ಭವಿಷ್ಯ ಎಂದಿದ್ದರು. ಆದರೆ, ಇಂದಿನ ಯುವಕರು ಅನುಕರಣೆ ಮಾಡುವ ಪ್ರವೃತ್ತಿಗೆ ಮುಂದಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಮಾರಂಭದಲ್ಲಿ ಜಿಪಂ ಸದಸ್ಯೆ ಚಂದ್ರಿಕಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ. ಸುರೇಶ್ ಇನ್ನಿತರರು ಹಾಜರಿದ್ದರು.