Advertisement

ಬಿಜೆಪಿಗೆ ಅಭಿವೃದ್ಧಿ ಬೇಕಾಗಿಲ್ಲ

12:23 PM Sep 18, 2018 | Team Udayavani |

ಬೆಂಗಳೂರು: ಅಧಿಕಾರ ದಾಹಕ್ಕೆ ಸಿಲುಕಿರುವ ಬಿಜೆಪಿಯವರಿಗೆ ಅಭಿವೃದ್ಧಿ ಕೆಲಸಗಳು ಅಥವಾ ರಾಜ್ಯದ ಹಿತ ಬೇಕಾಗಿಲ್ಲ. ಹೀಗಾಗಿಯೇ ಸಮ್ಮಿಶ್ರ ಸರ್ಕಾರ ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಆರೋಪಿಸಿದ್ದಾರೆ.

Advertisement

ರಾಜ್ಯ ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ಸೋಮವಾರ ವಿಶ್ವಕರ್ಮ ಜಯಂತಿಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಪುನರ್ವಸತಿಗೆ ವಿಶೇಷ ಪ್ಯಾಕೇಜ್‌ಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹೋದಾಗ ಆಹ್ವಾನ ನೀಡಿದರೂ ಬಿಜೆಪಿಯವರು ಬರಲಿಲ್ಲ. ಇದರಿಂದಾಗಿ ಬಿಜೆಪಿಯವರಿಗೆ ಅಭಿವೃದ್ಧಿ ಅಥವಾ ರಾಜ್ಯದ ಹಿತ ಬೇಕಾಗಿಲ್ಲ. ಅಧಿಕಾರಕ್ಕಾಗಿಯೇ ಇದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಕಿಡಿ ಕಾರಿದರು.

ಇನ್ನೊಂದೆಡೆ ಜನರ ಮೇಲಿನ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿಗಳು ಪೆಟ್ರೋಲ್‌, ಡೀಸೆಲ್‌ ದರ ಕಡಿಮೆ ಮಾಡಿದ್ದಾರೆ. ಇದೆಲ್ಲದರಿಂದ ಸರ್ಕಾರಕ್ಕೆ ಜನ ಬೆಂಬಲ ಹೆಚ್ಚಾಗುತ್ತದೆ ಎಂಬ ಆತಂಕದಿಂದ ವಿಷಯಾಂತರ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿಯವರ ಯಾವೊಂದು ಪ್ರಯತ್ನವೂ ಕೈಗೂಡುವುದಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next