Advertisement

ಸತ್ಯ ಹೇಳುವವವರನ್ನು ಕಂಡರೆ ಬಿಜೆಪಿಗೆ ಆಗುವುದಿಲ್ಲ: ಜಾರಕಿಹೊಳಿ

09:34 AM Oct 04, 2019 | Team Udayavani |

ಬೆಳಗಾವಿ: ಸತ್ಯ ಹೇಳುವವರನ್ನು ಕಂಡರೆ ಬಿಜೆಪಿಗೆ ಆಗಿ ಬರುವುದಿಲ್ಲ. ನಿಜವಾದ ಸಂಗತಿ ಹೇಳಿದವರನ್ನು ದೇಶದ್ರೋಹಿಗಳು ಎನ್ನುವದು ಬಿಜೆಪಿ ಸಂಸ್ಕೃತಿಯಾಗಿದೆ ಎಂದು ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.

Advertisement

ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನೆರೆ ಸಂತ್ರಸ್ತರಿಗೆ ಪರಿಹಾರದ ವಿಷಯದ ಬಗ್ಗೆ ಮಾತನಾಡಿದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕೇಂದ್ರ ಸಚಿವ ಸದಾನಂದ ಗೌಡ ದೇಶದ್ರೋಹ ಪಟ್ಟ ಕಟ್ಟಿದ್ದಾರೆ ಎಂದು ಟೀಕಿಸಿದರು.

ಚಕ್ರವರ್ತಿ ಸೂಲಿಬೆಲೆ ಅವರಿಗೆ ಇರುವಷ್ಟು ಬೆಂಬಲಿಗರು ಸದಾನಂದ ಗೌಡರಿಗೆ ಇಲ್ಲ. ಸೂಲಿಬೆಲೆ ಅವರು ವಾಸ್ತವ ಸ್ಥಿತಿ ಬಿಚ್ಚಿಟ್ಟಿದ್ದಾರೆ. ಆದರೆ ಇದನ್ನು ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಮುಂದೆ ಜನರೇ ಇವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.

ಆಡಳಿತ ಹಾಗೂ ಜನರ ಅನುಕೂಲತೆ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ಮೂರು ಭಾಗಗಳನ್ನಾಗಿ ಮಾಡಬೇಕು. ಜಿಲ್ಲೆಯ ವಿಭಜನೆಗೆ ನಮ್ಮ ಬೆಂಬಲ ಇದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next