Advertisement

 ಕೇಂದ್ರದಿಂದ ಹೆಲಿಕಾಪ್ಟರ್‌ ಕೊರತೆ ಸೃಷ್ಟಿ

03:27 AM Apr 04, 2019 | Sriram |

ಚನ್ನರಾಯಪಟ್ಟಣ: ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಖಂಡರಿಗೆ ಹೆಲಿಕಾಪ್ಟರ್‌ ದೊರೆಯದಂತೆ ಕುತಂತ್ರ ಮಾಡಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

Advertisement

ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗೆ ಹೆಲಿ ಕಾ ಪ್ಟರ್‌ ದೊರೆತಲ್ಲಿ ಹೆಚ್ಚು ಓಡಾಡುತ್ತಾರೆ. ಇದರಿಂದ ಹೆಚ್ಚು ಜನರಿಗೆ ತಲುಪುತ್ತಾರೆ
ಎಂಬ ಕಾರಣದಿಂದಾಗಿ ಹೆಲಿಕಾಪ್ಟರ್‌ಗಳ ಕೊರತೆ ಸೃಷ್ಟಿಸಲಾಗಿದೆ.ಈ ಮೂಲಕ ಬಿಜೆಪಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದರು.

ಚಿತ್ರ ನಟರು ಛತ್ರಿಯಿಂದ ಹೊರ ಬರಲಿ: ಮಂಡ್ಯದಲ್ಲಿ ಪ್ರಚಾರ ನಡೆಸುತ್ತಿ ರುವ ನಟ ಯಶ್‌ ಮತ್ತು ದರ್ಶನ್‌ ವಿರುದಟಛಿವೂ ಹರಿಹಾಯ್ದ ಅವರು,ನಟರಿಗೆ ಸಿನಿಮಾ ಚಿತ್ರೀಕರಣ ವೇಳೆ ಛತ್ರಿಯಲ್ಲಿ ಇದ್ದು ಅನುಭವವಾಗಿದೆ. ಅವರಿಗೆ ರೈತರು ಅನುಭವಿಸುವ ಕಷ್ಟ ಗೊತ್ತಿಲ್ಲ. ಈಗಲಾದರೂ ಛತ್ರಿಯಿಂದ ಹೊರ ಬಂದು ಬಿಸಿಲ ತಾಪಮಾನ ನೋಡಲಿ. ಆಗ ನಾಡಿನ ಜನರು ಅನುಭವಿಸುವ ಕಷ್ಟಗಳು ತಿಳಿಯುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next