Advertisement
50 ವರ್ಷಗಳಿಂದ ಇಲ್ಲೇ ಬಾಳುತ್ತಿರುವವರನ್ನು ದೇಶದಿಂದ ಹೊರದಬ್ಬುವ ಪ್ರಯತ್ನಗಳು ನಡೆಯುತ್ತಿವೆ. ಅವರೆಲ್ಲಿ ಹೋಗಬೇಕು? ಅವರನ್ನೆಲ್ಲಿಗೆ ಕಳುಹಿಸಬೇಕು? ರಕ್ತದ ಕೋಡಿ ಹರಿಯಬೇಕಾ? ಅವರನ್ನು ರಕ್ಷಿಸಲೇಬೇಕಾಗಿದೆ ಎಂದರು. ಕಳೆದ ಚುನಾವಣೆಯಲ್ಲಿ ಜೆಡಿಎಸ್ 37 ಸ್ಥಾನಗಳನ್ನು ಗಳಿಸಿತ್ತು. ಆದರೆ, 78 ಸ್ಥಾನ ಗೆದ್ದ ಕಾಂಗ್ರೆಸ್ ಬೆಂಬಲ ನೀಡಿದ್ದರಿಂದ, ದೆಹಲಿ ಮುಖಂಡರು ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಬೇಕೆಂದು ಬಯಸಿದ್ದರಿಂದ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ದೇಶದ29 ಪಕ್ಷಗಳು ಕುಮಾರಸ್ವಾಮಿಯವರು ಸಿಎಂ ಆಗಬೇಕು ಎಂದು ಬಯಸಿದ್ದವು. ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಈ ಪಕ್ಷಗಳು ಭಾಗಿಯಾಗಿದ್ದೇ ಅದಕ್ಕೆ ಸಾಕ್ಷಿ. ಇದರಲ್ಲಿ ವೈಯಕ್ತಿಕ ಹೋರಾಟ ಏನಿಲ್ಲ. ಅಷ್ಟೇಕೆ, ನಾನು ಪ್ರಧಾನಿಯಾಗಿದ್ದು ಕೂಡ ಕಾಂಗ್ರೆಸ್ನ ಸಹಕಾರದಲ್ಲೇ ಎಂದರು.
ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಭಾನುವಾರದಿಂದಲೇ ಮೈತ್ರಿ ಸರ್ಕಾರದ ಅಭ್ಯರ್ಥಿಗಳ ಪರ ಪ್ರಚಾರ ಆರಂಭಿಸಿದ್ದು, ಸೋಮವಾರ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಕಾಂಗ್ರೆಸ್ ಅಭ್ಯರ್ಥಿ ಪರ ಜಂಟಿ ಪ್ರಚಾರ ನಡೆಸಲಿದ್ದಾರೆ. ಲಂಡನ್ ಪ್ರವಾಸದಿಂದ ಭಾನುವಾರ ಬೆಂಗಳೂರಿಗೆ ಆಗಮಿಸಿದ ದೇವೇಗೌಡರು, ರಾಮನಗರ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಜೆಡಿಎಸ್ನಿಂದ ಕಣಕ್ಕಿಳಿದಿರುವ ಸೊಸೆ ಅನಿತಾ ಕುಮಾರಸ್ವಾಮಿ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಸೋಮವಾರ ಬಳ್ಳಾರಿ ಜಿಲ್ಲೆಯ ಕೂಡ್ಲಗಿಯಲ್ಲಿ ಸಿದ್ದರಾಮಯ್ಯ
ಅವರೊಂದಿಗೆ ಬಹಿರಂಗ ಸಭೆಯಲ್ಲಿ ವೇದಿಕೆ ಹಂಚಿಕೊಳ್ಳಲಿದ್ದಾರೆ. ಸುಮಾರು 12-13 ವರ್ಷಗಳ ನಂತರ ದೇವೇಗೌಡರು ಹಾಗೂ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರದಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಂಗಳವಾರ ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಪರ ಸಿದ್ದರಾಮಯ್ಯ ಅವರೊಂದಿಗೆ ಪ್ರಚಾರ ನಡೆಸಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಈ ಮಧ್ಯೆ ದೇವೇಗೌಡರು, ಬಳ್ಳಾರಿ ಹಾಗೂ ಶಿವಮೊಗ್ಗದಲ್ಲಿ ಪ್ರಚಾರ ಮುಗಿಸಿ ಅ.31 ಹಾಗೂ ನ.1ರಂದು ಮತ್ತೂಂದು ಸುತ್ತಿನಲ್ಲಿ ರಾಮನಗರ ಕ್ಷೇತ್ರದಲ್ಲಿ ಅನಿತಾ ಕುಮಾರಸ್ವಾಮಿ ಪರ ಪ್ರಚಾರ ಮಾಡಲಿದ್ದಾರೆ. ಹಾಗೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಹಾಗೂ ಪದಾಧಿಕಾರಿಗಳ ತಂಡ ಭಾನುವಾರದಿಂದ ಉಪಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ.
Related Articles
Advertisement
ನಾನು ಮುಖ್ಯಮಂತ್ರಿ ಆಗಿದ್ದು, ಪ್ರಧಾನಿಯಾಗಿದ್ದು ದೈವದ ಲೀಲೆ. ನಾನು ಇಲ್ಲಿಂದ ಸ್ಪರ್ಧಿಸಿದ್ದು ಸಹ ದೈವಾನುಗ್ರಹ.ಕುಮಾರಸ್ವಾಮಿಯವರನ್ನು ಸಹ ಇದೇ ಕ್ಷೇತ್ರ ಕೈಹಿಡಿದಿದೆ. ಅನಿತಾ ಕುಮಾರಸ್ವಾಮಿ ಅವರ ಸ್ಪರ್ಧೆ ಇಲ್ಲಿ ಸಾಂಕೇತಿಕ ಅಷ್ಟೆ. ರಾಮನಗರ ಮತ್ತು ಚನ್ನಪಟ್ಟಣ ಎರಡೂ ಸಹ ಕುಮಾರಸ್ವಾಮಿಯವರ ಎರಡು ಕಣ್ಣುಗಳಿದ್ದ ಹಾಗೆ. ಇಡೀ ಜಿಲ್ಲೆಯಲ್ಲಿ ಅಭಿವೃದ್ದಿ ಆಗಲಿದೆ.
● ದೇವೇಗೌಡ, ಮಾಜಿ ಪ್ರಧಾನಿ