Advertisement

ರೆಸಾರ್ಟ್‌ ರಾಜಕೀಯಕ್ಕೂ ಬಿಜೆಪಿಗೂ ಸಂಬಂಧವಿಲ್ಲ

06:05 AM Dec 02, 2018 | |

ಗದಗ: ಬಿಜೆಪಿ ಮುಖಂಡರ ಭೇಟಿಯನ್ನೇ ನೆಪವಾಗಿಸಿಕೊಂಡು ಕಾಂಗ್ರೆಸ್‌-ಜೆಡಿಎಸ್‌ನ ಅತೃಪ್ತ ಶಾಸಕರು ತಮ್ಮ ಪಕ್ಷದ ಹೈಕಮಾಂಡ್‌ ಮೇಲೆ ಪ್ರಭಾವ ಬೀರುತ್ತಿದ್ದಾರೆ. 

Advertisement

ಕಾಂಗ್ರೆಸ್‌ ಶಾಸಕರ ರೆಸಾರ್ಟ್‌ ರಾಜಕೀಯಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರ ಮಂಡ್ಯ, ಹಾಸನ ಜಿಲ್ಲೆಗಳ ಸರ್ಕಾರ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಜಗಳದಿಂದಲೇ ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ. ತಾವಾಗಿಯೇ ರಾಜೀನಾಮೆ ನೀಡಿ ನಮ್ಮೊಂದಿಗೆ ಬಂದರೆ ಸರ್ಕಾರ ಮಾಡುತ್ತೇವೆಯೇ ವಿನಃ ಬಿಜೆಪಿ ರೆಸಾರ್ಟ್‌ ರಾಜಕೀಯ ಮಾಡುವುದಿಲ್ಲ. ರೆಸಾರ್ಟ್‌ ರಾಜಕೀಯ, ಶಾಸಕರ ಖರೀದಿ ಸಂಸ್ಕೃತಿಯಿಂದ ದೂರ ಇರುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಖಡಕ್‌ ಸೂಚನೆ ನೀಡಿದ್ದಾರೆ. ಒಂದೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೂ ಯಡಿಯೂರಪ್ಪ ಸಿಎಂ ಆಗುತ್ತಾರೆ. ಇದನ್ನು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಯಾವತ್ತೋ ನಿಶ್ಚಯಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next