Advertisement

ಬಿಜೆಪಿಯ ಐವರು ಶಾಸಕರು ಕಾಂಗ್ರೆಸ್‌ ಸೇರ್ತಾರೆ: ಬೇಳೂರು

06:25 AM Dec 09, 2018 | Team Udayavani |

ಶಿವಮೊಗ್ಗ: ಬಿಜೆಪಿಯ ಐವರು ಶಾಸಕರು ಕಾಂಗ್ರೆಸ್‌ಗೆ ಬರುವ ಸಾಧ್ಯತೆಯಿದೆ. ಈಗಾಗಲೇ ಮುಖ್ಯಮಂತ್ರಿಗಳ ಜತೆಯೂ ಮಾತನಾಡಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. 

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ “ಆಪರೇಷನ್‌ ಕಮಲ’ಕ್ಕೆ ಮುಂದಾದರೆ ಅದಕ್ಕೆ ತಿರುಗೇಟು ನೀಡುವ ಸಾಮರ್ಥ್ಯ ನಮಗಿದೆ. ಸರಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಶಾಸಕರನ್ನೇ ಕಾಂಗ್ರೆಸ್‌ಗೆ ಸೆಳೆಯಲಾಗುವುದು. ಇದೆಲ್ಲ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಸಂಪರ್ಕದಲ್ಲಿರುವ ಬಿಜೆಪಿ ಶಾಸಕರನ್ನು ಕಾಂಗ್ರೆಸ್‌ಗೆ ಕರೆ ತರದಿದ್ದರೆ ನನ್ನ ಹೆಸರನ್ನೇ ಬದಲಾಯಿಸಿಕೊಳ್ಳುವೆ ಎಂದರು. 

ಯಡಿಯೂರಪ್ಪ ಸೇರಿ ಬಿಜೆಪಿಯ ಕೆಲವರು ಸರ್ಕಾರ ಆಗ ಬೀಳುತ್ತೆ, ಈಗ ಬೀಳುತ್ತೆ ಎಂದು ಹೇಳುತ್ತಾರೆ. ಆದರೆ, ಯಾವುದೇ ಕಾರಣಕ್ಕೂ ಸರ್ಕಾರ ಬೀಳುವುದಿಲ್ಲ. ಆಪರೇಷನ್‌ ಕಮಲ ನಡೆಸಲು ಸಾಧ್ಯವೇ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next