Advertisement

ಬಿಜೆಪಿಯ ಆಪರೇಷನ್ ಕಮಲ ವಿಫಲ, ರಾಜ್ಯ ಸರ್ಕಾರ ಸುಭದ್ರ: ಖರ್ಗೆ

10:07 AM Jan 16, 2019 | Sharanya Alva |

ನವದೆಹಲಿ:ಭಾರತೀಯ ಜನತಾ ಪಕ್ಷ ಕುದುರೆ ವ್ಯಾಪಾರದಲ್ಲಿ ತೊಡಗಿದೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್,ಜೆಡಿಎಸ್ ಮೈತ್ರಿ ಸರ್ಕಾರ ಸುಭದ್ರವಾಗಿದೆ. ಬಿಜೆಪಿಯವರ ಆಪರೇಷನ್ ಕಮಲ ಸಂಪೂರ್ಣ ವಿಫಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತು ಮಾತನಾಡಿರುವ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಅಣತಿಯಂತೆ ಶಾಸಕರನ್ನು ಖರೀದಿಸುವ ಕೆಲಸ ನಡೆಯುತ್ತಿದೆ. ಬಿಜೆಪಿಯವರ ಎಲ್ಲಾ ಬೆಳವಣಿಗೆಗಳನ್ನು ದೇಶದ ಜನ ಗಮನಿಸುತ್ತಿದ್ದಾರೆ ಎಂದರು.

ಐಟಿ, ಸಿಬಿಐ, ಇ.ಡಿ.ದಾಳಿ ಮೂಲಕ ಶಾಸಕರಿಗೆ ಬೆದರಿಕೆಯೊಡ್ಡಲಾಗುತ್ತಿದೆ. ಜನರು ಆಯ್ಕೆ ಮಾಡಿದ ಶಾಸಕರನ್ನು ಬಿಜೆಪಿ ಹೈಜಾಕ್ ಮಾಡುತ್ತಿದೆ. ಬಿಜೆಪಿಯವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆ ಇಲ್ಲ. ಬಿಜೆಪಿ ಶಾಸಕರನ್ನು ಹೋಟೆಲ್ ನಲ್ಲಿ ಯಾಕೆ ಕೂಡಿ ಹಾಕಿದ್ದಾರೆ ಎಂಬುದನ್ನು ಹೇಳಲಿ ಎಂದು ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next