Advertisement

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವ ಬಾವಿಯಲ್ಲಿ ಪತ್ತೆ

10:08 PM Jul 30, 2023 | Team Udayavani |

ಬೆಳ್ತಂಗಡಿ: ಅರಸಿನಮಕ್ಕಿಯ ಕುಂಟಾಲಪಳಿಕೆಯಲ್ಲಿ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಅರಸಿನಮಕ್ಕಿಯಲ್ಲಿ ನಡೆದಿದೆ.

Advertisement

ಕುಂಟಾಲಪಳಿಕೆ ನಿವಾಸಿ ಹರೀಶ್‌ ಆಚಾರ್ಯ (40) ಅವರು ಎರಡು ದಿನದಿಂದ ನಾಪತ್ತೆಯಾಗಿದ್ದರು. ಜು. 30ರಂದು ಬೆಳಗ್ಗೆ ಅವರ ತಂದೆ ಮನೆಯ ಬಾವಿಯಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಹರೀಶ್‌ ತಂದೆ, ತಾಯಿ ಅಕ್ಕಪಕ್ಕದಲ್ಲಿ ಬೇರೆ ಬೇರೆ ಮನೆಗಳಲ್ಲಿ ವಾಸಿಸುತ್ತಿದ್ದು, ಹರೀಶ್‌ ಅವರು ಅವಿವಾಹಿತರಾಗಿದ್ದು ತಾಯಿಯೊಂದಿಗೆ ವಾಸಿಸುತ್ತಿದ್ದರು. ಅವರು ಆಕಸ್ಮಿಕವಾಗಿ ಬಾವಿಗೆ ಬಿದ್ದರೋ ಅಥವಾ ಇತರ ಕಾರಣವಿರಬಹುದೋ ಎನ್ನುವ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next