Advertisement

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

10:20 PM Oct 05, 2024 | Team Udayavani |

ಉಳ್ಳಾಲ: ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ ಕುಜುಮಗದ್ದೆ ನಿವಾಸಿ ಪ್ರಸಾದ್‌ (44) ಅವರ ಮೃದೇಹ ಮನೆಯ ಬಳಿಯ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

Advertisement

ಪೈಂಟರ್‌ ವೃತ್ತಿ ಮಾಡುತ್ತಿದ್ದ ಪ್ರಸಾದ್‌ ಅ.4 ರಂದು ಮನೆಯಲ್ಲಿ ಮೊಬೈಲ್‌ ಬಿಟ್ಟು ಹೋಗಿದ್ದರು. ಅವರು ನಾಪತ್ತೆಯಾಗಿರುವ   ಕುರಿತು ಸಹೋದರ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.  ಮೂಲತಃ ಜೆಪ್ಪು ಗೋರ್ದಂಡುವಿನವರಾಗಿದ್ದ  ಪ್ರಸಾದ್‌ ಅವರ  ಕುಟುಂಬ ಕೆಲವು ವರ್ಷಗಳಿಂದ  ಕುಜುಮಗದ್ದೆಯಲ್ಲಿ ನೆಲೆಸಿದ್ದರು. ಅವಿವಾಹಿತರಾಗಿದ್ದ ಅವರು ಕೆಲವು ದಿನಗಳಿಂದ ಖನ್ನತೆಗೆ ಒಳಗಾಗಿದ್ದರು.  ಮೃತರು ತಾಯಿ, ತಂದೆ, ಇಬ್ಬರು ಸಹೋದರರು, ಓರ್ವ ಸಹೋದರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next