Advertisement

ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದು ಪ್ರಿಯತಮ ಆತ್ಮಹತ್ಯೆ

01:21 PM May 21, 2022 | Team Udayavani |

ಕುಣಿಗಲ್: ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದ ಪ್ರಿಯತಮ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮಾಗಡಿ ರಸ್ತೆ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ಆರು ತಿಂಗಳ ಬಳಿಕ ಅಸ್ತಿಪಂಜರವಾಗಿ ಶವ ಪತ್ತೆಯಾಗಿದೆ.

Advertisement

ಮೂಲತಃ ಕುಣಿಗಲ್ ತಾಲೂಕಿನ ಅರಮನೆ ಹೊನ್ನಮಾಚಹಳ್ಳಿ ಗ್ರಾಮದ ಹಾಲಿ ಬೆಂಗಳೂರು ಸುಂಕದಕಟ್ಟೆ ನಿವಾಸಿ ಸಂತೋಷ್ (28), ಹುಲಿಯೂರುದುರ್ಗ ಹೋಬಳಿ ಕೆಬ್ಬಳಿ ಗ್ರಾಮದ ಶಾಲಿನಿ (21) ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಘಟನೆ ವಿವರ: ಸಂತೋಷ್ ಹಾಗೂ ಶಾಲಿನಿ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಹುಡುಗಿಯ ಕಡೆಯವರು ಸಂತೋಷನಿಗೆ ಕೊಟ್ಟು ಮದುವೆ ಮಾಡಲು ನಿರಾಕರಿಸಿದ್ದರು ಎನ್ನಲಾಗಿದೆ. ಇದರಿಂದ ಬೇಸರಗೊಂಡ ಯುವತಿ ಅಕ್ಟೋಬರ್-2021 ರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ವಿಚಾರ ತಿಳಿದ ಸಂತೋಷ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಪೋಷಕರು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದರು.  ಈ ಸಂಬಂಧ ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

ಸಂತೋಷ್ ತನ್ನ ಪ್ರಿಯತಮೆಯ ನೆನಪಿನಿಂದ ಹೊರ ಬಾರಲಾಗದೇ ನ. 28 ರಂದು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನಿಂದ ತನ್ನ ಸ್ವಗ್ರಾಮ ಅರಮನೆ ಹೊನ್ನಮಾಚನಹಳ್ಳಿಗೆ ಬಂದು ಬೆಂಗಳೂರಿಗೆ ವಾಪಸ್ಸ್ ಹೊಗುವ ವೇಳೆ ಹುಲಿಯೂರುದುರ್ಗ ದಟ್ಟ ಅರಣ್ಯ ಪ್ರದೇಶದಲ್ಲಿ ಗಿಡಕ್ಕೆ ಹೊಡೆಯುವ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Advertisement

ಅಸ್ಥಿಪಂಜರವಾದ ಮೃತ ದೇಹ: ಹುಲಿಯೂರುದುರ್ಗ ದಟ್ಟ ಅರಣ್ಯ ಪ್ರದೇಶದಲ್ಲಿ ಅನಾಮದೇಯವಾಗಿ ನಿಲ್ಲಿಸಿದ ಬೈಕ್ ಹಾಗೂ ಅಸ್ತಿಪಂಜರವಾಗಿ ಬಿದ್ದಿದ್ದ ಮೃತ ದೇಹವನ್ನು ನೋಡಿದ ಅರಣ್ಯ ಸಿಬ್ಬಂದಿಗಳು ಹುಲಿಯೂರುದುರ್ಗ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಪಿಎಸ್‌ಐ ಚೇತನ್ ಭೇಟಿ ನೀಡಿ ಪರಿಶೀಲಿಸಿ, ಬೈಕ್ ಹಾಗೂ ಅಸ್ತಿಪಂಜರ ದೇಹವನ್ನು ವಶಕ್ಕೆ ಪಡೆದು, ತನಿಖೆ ನಡೆಸಿ, ಸಂತೋಷ್‌ನ ಮೃತ ದೇಹ ಎಂದು ತಿಳಿದು ಪ್ರಕರಣ ದಾಖಲಿಸಿಕೊಂಡು ತನಿಖೆಕೈಗೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next