Advertisement

ಸಾಲಗಾರ ರೈತರನ್ನು ಜೈಲಿಗಟ್ಟಲ್ಲ: ರಾಹುಲ್‌ ಗಾಂಧಿ

06:37 PM Apr 19, 2019 | mahesh |

ನವದೆಹಲಿ: ಈ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ, ಸಾಲ ಮಾಡಿರುವ ರೈತರನ್ನು ಯಾವುದೇ ಕಾರಣಕ್ಕೂ ಜೈಲಿಗಟ್ಟಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಾಗ್ಧಾನ ಮಾಡಿದ್ದಾರೆ.

Advertisement

ಉತ್ತರಪ್ರದೇಶದ ಬದೌನ್‌ ಹಾಗೂ ಗುಜರಾತ್‌ನ ವಂಥಿಲ್‌ನಲ್ಲಿ ಗುರುವಾರ ಅವರು ಚುನಾವಣಾ ಪ್ರಚಾರ ರ್ಯಾಲಿ ನಡೆಸಿ ಮಾತನಾಡಿದ್ದಾರೆ. ಸಾವಿರಾರು ಕೋಟಿ ರೂ. ಸಾಲ ಮಾಡಿರುವ ದೊಡ್ಡ ದೊಡ್ಡ ಉದ್ಯಮಿಗಳನ್ನು ಜೈಲಿಗಟ್ಟುವ ಬದಲು, ಅವರಿಗೆ ವಿದೇಶಕ್ಕೆ ಪರಾರಿಯಾಗಲು ಅವಕಾಶ ಕಲ್ಪಿಸಲಾ ಗುತ್ತಿದೆ. ಆದರೆ, ಕೇವಸ 20 ಸಾವಿರ ರೂ. ಸಾಲ ಮಾಡಿ ಮರುಪಾವತಿ ಮಾಡಲು ಸಾಧ್ಯವಾಗದೇ ಇರುವ ರೈತರನ್ನು ಜೈಲಿಗಟ್ಟಲಾಗುತ್ತಿದೆ. ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹೀಗಾಗುವುದಿಲ್ಲ. ದೊಡ್ಡ ದೊಡ್ಡ ಸುಸ್ತಿದಾರರನ್ನು ಜೈಲಿಗೆ ಕಳುಹಿಸು ವವರೆಗೆ ಯಾವೊಬ್ಬ ರೈತರನ್ನೂ ಕಂಬಿ ಎಣಿಸುವಂತೆ ಮಾಡುವುದಿಲ್ಲ ಎಂದಿದ್ದಾರೆ ರಾಹುಲ್‌.

ಇದೇ ವೇಳೆ, ಎಸ್‌ಪಿ -ಬಿಎಸ್‌ಪಿ ವಿರುದ್ಧವೂ ವಾಗ್ಧಾಳಿ ನಡೆಸಿದ ಅವರು, ಎರಡೂ ಪಕ್ಷಗಳು ಯಾವತ್ತಾದರೂ ಚೌಕಿದಾರ್‌ ಚೋರ್‌ ಹೆ ಎಂದು ಹೇಳಿದ್ದಿದೆಯೇ? ಅವರು ಹೇಳುವುದಿಲ್ಲ. ಏಕೆಂದರೆ, ಈ ಎರಡೂ ಪಕ್ಷಗಳು ಬಿಜೆಪಿ ಜತೆ ಕೈಜೋಡಿಸಿವೆ ಎಂದು ಆರೋಪಿಸಿದ್ದಾರೆ.

ನಮ್ಮ ಸರ್ಕಾರ ಅಧಿ ಕಾರಕ್ಕೆ ಬಂದರೆ, ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಪ್ರತ್ಯೇಕ ಕೃಷಿ ಬಜೆಟ್‌ ಮಂಡಿಸುತ್ತೇವೆ ಮತ್ತು ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತೇವೆ ಎಂದೂ ಆಶ್ವಾಸನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next