Advertisement

ಈಜಲು ಹೋದ ಬಾಲಕ ಸಾವು

01:54 PM Apr 30, 2019 | pallavi |

ಘಟಪ್ರಭಾ: ಕೊಣ್ಣೂರ ಪಟ್ಟಣದ ಸಮೀಪ ಹರಿಯುತ್ತಿರುವ ಘಟಪ್ರಭಾ ನದಿಯಲ್ಲಿ ಸೋಮವಾರ ಬೆಳಗ್ಗೆ ಈಜಲು ಹೋದ ಬಾಲಕನೊಬ್ಬ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದು, ಸಂಜೆಯವರೆಗೆ ಶೋಧ ಕಾರ್ಯ ನಡೆಸಿದ ನಂತರ ಮೃತದೇಹ ಪತ್ತೆಯಾಗಿದೆ.

Advertisement

ಪ್ರಶಾಂತ ಕೌಜಲಗಿ (11) ಮೃತ ಬಾಲಕ. ಈತ ಸ್ಥಳೀಯ ನಿವಾಸಿ ಜಯಪಾಲ ಕೌಜಲಗಿ ಅವರ ಪುತ್ರ. ಈತ ಸ್ಥಳೀಯ ಖಾಸಗಿ ಶಾಲೆಯ ವಿದ್ಯಾರ್ಥಿಯಾಗಿದ್ದನು.

ಪ್ರತಿದಿನ ತಂದೆಯ ಜೊತೆಗೆ ನದಿಗೆ ಸ್ನಾನ ಮಾಡಲು ಹೋಗುತ್ತಿದ್ದ ಬಾಲಕ ಸೋಮವಾರ ತಂದೆ ಬೇರೆ ಕೆಲಸದ ನಿಮಿತ್ತ ನದಿಗೆ ಹೋಗಿಲ್ಲ. ಆದರೆ ಬಾಲಕ ತಾನೊಬ್ಬನೇ ಸ್ನಾನ ಮಾಡಲು ನದಿಗೆ ತೆರಳಿದ್ದಾನೆ. ಅಲ್ಲಿ ದಡದಲ್ಲಿ ಕುಳಿತು ಸ್ನಾನ ಮಾಡುತ್ತಿದ್ದಾಗ ಆಕಸ್ಮಾತ್‌ ಕಾಲು ಜಾರಿ ನದಿಯಲ್ಲಿ ಬಿದ್ದಿದ್ದಾನೆ. ಬಾಲಕ ನದಿಯಲ್ಲಿ ಬಿದ್ದಿರುವುದನ್ನು ಸ್ಥಳದಲ್ಲಿದ್ದ ಜನರು ಗಮನಿಸಿ ಉಳಿಸಲು ಪ್ರಯತ್ನಿಸಿದ್ದಾರೆ. ಆದರೆ ಬಾಲಕ ಅಷ್ಟರಲ್ಲಿಯೇ ನದಿಯಲ್ಲಿ ಮುಳುಗಿ ಮಾಯವಾಗಿದ್ದಾನೆ. ಎಷ್ಟೇ ಪ್ರಯತ್ನ ಪಟ್ಟರೂ ಬಾಲಕ ಅವರ ಕೈಗೆ ಸಿಕ್ಕಿಲ್ಲ್ಲವೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪೊಲೀಸ್‌ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳೀಯರೊಂದಿಗೆ ಸುದೀರ್ಘ‌ ಶೋಧ ಕಾರ್ಯ ನಡೆಸಿ ಸಂಜೆ 5.30ರ ಸುಮಾರಿಗೆ ಮೃತದೇಹ ಪತ್ತೆ ಮಾಡಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next