Advertisement
“ಡಿ. 22ರಂದು ಸಂಪುಟ ವಿಸ್ತರಣೆಯಾಗಲಿದೆ. ಆ ಬಗ್ಗೆ ಯಾವುದೇ ಅನುಮಾನ ಬೇಡ’ ಎಂದು ಭರವಸೆ ನೀಡಿದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶಾಸಕರು ಹೆಚ್ಚು ಕೋಪ-ತಾಪ ಪ್ರದರ್ಶಿಸದಂತೆ ಆಕ್ರೋಶ ತಣಿಸುವ ಪ್ರಯತ್ನ ಮಾಡಿದರು.
ಎರಡು ಗಂಟೆಗಳ ಕಾಲ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲವು ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸದಿದ್ದರೆ ನಮ್ಮ ಸರಕಾರ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದರು. ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂದು ಜೆಡಿಎಸ್ಗೆ ಬೆಂಬಲ ನೀಡಿದ್ದೀರಿ. ಆದರೆ ನಮ್ಮದೇ ಸರಕಾರ ಇದ್ದರೂ ನಮಗೆ ಬೆಲೆ ಇಲ್ಲವೇ ಎಂದು ಅಲವತ್ತುಕೊಂಡರು ಎಂದು ಮೂಲಗಳು ತಿಳಿಸಿವೆ. ಸಿದ್ದರಾಮಯ್ಯ ಸಮಾಧಾನ
ಶಾಸಕರನ್ನು ಸಮಾಧಾನಪಡಿಸಿದ ಸಿದ್ದು, ಅನುದಾನ ಬಿಡುಗಡೆ, ಅಧಿಕಾರಿಗಳ ವರ್ಗಾವಣೆ ಕುರಿತು ಸಮನ್ವಯ ಸಮಿತಿ ಯಲ್ಲೂ ಚರ್ಚಿಸಲಾಗಿದೆ. ಸಿಎಂ ಜತೆಯೂ ಮತ್ತೆ ಚರ್ಚಿಸಲಾಗುವುದು. ಸದ್ಯದಲ್ಲೇ ಜಂಟಿ ಶಾಸಕಾಂಗ ಪಕ್ಷದ ಸಭೆ ಕರೆದು ಸಿಎಂ ಅವರನ್ನೂ ಕರೆಸಲಾಗುವುದು. ಡಿ. 20ರಂದೇ ನಾನು ದಿಲ್ಲಿಗೆ ಹೋಗುತ್ತಿದ್ದು, ಸಂಪುಟ ವಿಸ್ತರಣೆ ಬಗ್ಗೆಯೂ ಹೈಕಮಾಂಡ್ ಜತೆ ಚರ್ಚಿಸಲಾಗುವುದು ಎಂದರು.
Related Articles
Advertisement
ಅರ್ಧಕ್ಕೂ ಹೆಚ್ಚು ಶಾಸಕರು ಗೈರು: ಶಾಸಕಾಂಗ ಪಕ್ಷದ ಸಭೆಗೆ ಅರ್ಧಕ್ಕೂ ಹೆಚ್ಚು ಶಾಸಕರು ಗೈರು ಹಾಜರಾಗಿದ್ದರು. ಶಾಸಕಾಂಗ ಪಕ್ಷದ ಸಭೆಯಲ್ಲಿ 117 ಮಂದಿ ಭಾಗವಹಿಸಬೇಕಿತ್ತು. ಆದರೆ 58 ಜನ ಶಾಸಕರು ಮಾತ್ರ ಸಭೆಗೆ ಹಾಜರಾಗಿದ್ದರು.
ಹಿರಿಯರನ್ನು ಕೈಬಿಡಲು ಆಗ್ರಹ: ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಬಹುತೇಕ ಕಾಂಗ್ರೆಸ್ ಶಾಸಕರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ.
ವಿಸ್ತರಣೆ ಬದಲು ಪುನಾರಚನೆಡಿ.22ರಂದು ಸಂಪುಟ ವಿಸ್ತರಿಸಲು ಕಸರತ್ತು ಆರಂಭಿಸಿರುವ ಕಾಂಗ್ರೆಸ್ ನಾಯಕರು ಪುನಾರಚನೆ ಮಾಡುವ ಕುರಿತೂ ಆಲೋಚಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಖಾಲಿ ಇರುವ ಆರು ಸ್ಥಾನಗಳ ಜತೆಗೆ ನಾಲ್ವರು ಸಚಿವರನ್ನು ಬದಲಾಯಿಸುವ ಕುರಿತೂ ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಬಹುದು. ಡಿ.20ರಂದು ದಿಲ್ಲಿಗೆ ತೆರಳಿ, ಆ ದಿನ ಸಂಜೆ ಸಭೆ ನಡೆಯಲಿದೆ. ರಮೇಶ್ ಜಾರಕಿಹೊಳಿ ಗೈರಿನ ಬಗ್ಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಉ. ಕರ್ನಾಟಕಕ್ಕೆ ಆದ್ಯತೆ ಕೊಡಬೇಕೆಂದು ಕೇಳಿದ್ದಾರೆ. ಈ ಬಗ್ಗೆ ಗಮನ ಹರಿಸಲಾಗುವುದು.
– ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ