Advertisement

ಶಿರಾಡಿ ಘಾಟ್‌ನಲ್ಲಿಬಸ್‌ ಸಂಚಾರ ಆರಂಭ

01:37 PM Oct 04, 2018 | Team Udayavani |

ಸಕಲೇಶಪುರ: ಶಿರಾಡಿ ಘಾಟ್‌ನಲ್ಲಿ ಪ್ರಯಾಣಿಕರ ಬಸ್‌ಗಳ ಸಂಚಾರಕ್ಕೆ ಬುಧವಾರದಿಂದ ಅವಕಾಶ ನೀಡಿದ್ದ ರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಹೋಗಲು ಪ್ರಯಾಣಿಕರಿಗೆ ಅನುಕೂಲವಾಗಿದೆ. ಕಳೆದ ಜೂನ್‌, ಜುಲೈ, ಆಗಸ್ಟ್‌ ಮಾಹೆಯಲ್ಲಿ ಸುರಿದ ವ್ಯಾಪಕ ಮಳೆಯಿಂದಾಗಿ ಶಿರಾಡಿ ಘಾಟ್‌ನಲ್ಲಿ ಅಲ್ಲಲ್ಲಿ ಭೂ ಕುಸಿತ ಉಂಟಾಗಿ ರಸ್ತೆಯನ್ನು ಬಂದ್‌ ಮಾಡಲಾಗಿತ್ತು.

Advertisement

ಕಳೆದ ಸೆಪ್ಟೆಂಬರ್‌ ಮೊದಲ ವಾರದಿಂದ ಲಘು ವಾಹನಗಳಿಗೆ ಶಿರಾಡಿಯಲ್ಲಿ ಸಂಚರಿಸಲು ಅವಕಾಶ ನೀಡಲಾಗಿದ್ದು ಬಸ್‌ಗಳ ಸಂಚಾರಕ್ಕೆ ಅವಕಾಶ ನೀಡು ವಂತೆ ಸಾರ್ವಜನಿಕ ವಲಯದಿಂದ ಒತ್ತಡ ಬಂದಿದ್ದರಿಂದ ಅ.3 ರಿಂದ ಶಿರಾಡಿ ಘಾಟ್‌ನಲ್ಲಿ ಪ್ರಯಾಣಿಕರ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಆದೇಶ ಮಾಡಿದ್ದರು.

ಇದರಿಂದ ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ, ಧರ್ಮ ಸ್ಥಳಕ್ಕೆ ಹೋಗಲು ಭಕ್ತಾದಿಗಳಿಗೆ ಬಹಳ
ಅನೂಕೂಲವಾಗುತ್ತಿದೆ. ಜೊತೆಗೆ ದಕ್ಷಿಣ ಕನ್ನಡದ ವಿವಿಧ ವಿದ್ಯಾ ಸಂಸ್ಥೆಗಳಲ್ಲಿ ಓದುತ್ತಿರುವ ಸಕಲೇಶಪುರ ತಾಲೂಕಿನ ವಿದ್ಯಾರ್ಥಿಗಳು ಮತ್ತು ಪೋಷಕರಿಗೂ ಸಹ ಬಹಳ ಅನುಕೂಲ ವಾಗುತ್ತಿದ್ದು ಜೊತೆಗೆ ಬೆಂಗಳೂರು ಮಂಗಳೂರು ನಡುವೆ ವ್ಯಾಪಾರ, ಉದ್ಯೋಗ ಮತ್ತಿತರ ಉದ್ದೇಶಗಳಿಂದ ತಿರುಗಾಡುವವರಿಗೂ ಸಹ ಅನು ಕೂಲವಾಗುತ್ತಿದೆ. ಇದೇ ವೇಳೆ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ಚಿಂತನೆ ಮಾಡಲಾಗುತ್ತಿದ್ದು ಇನ್ನು ಕೆಲವು ದಿನಗಳಲ್ಲಿ ಶಿರಾಡಿಯಲ್ಲಿ ಬಾರಿ ವಾಹನಗಳ ಸಂಚಾರ ಸಹ ಆರಂಭಗೊಳ್ಳುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next