Advertisement

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

10:24 AM Sep 17, 2024 | Team Udayavani |

ಬೆಂಗಳೂರು: ನಗರದಲ್ಲಿ ರೋಡ್‌ ರೇಜ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದಿರಾ ನಗರ ಮೆಟ್ರೋ ನಿಲ್ದಾಣ ಬಳಿ ಪ್ರಕರಣವೊಂದು ಬೆಳಕಿಗೆ ಬಂದಿದೆ.

Advertisement

ಸೆ.15ರಂದು ಸಂಜೆ 6 ಗಂಟೆ ಸುಮಾರಿಗೆ ಇಂದಿರಾನಗರ ಮೆಟ್ರೋ ನಿಲ್ದಾಣ ಸಿಗ್ನಲ್‌ನಲ್ಲಿ ಏಕಮುಖ ರಸ್ತೆಯಲ್ಲಿ ಬೈಕ್‌ ಸವಾರ ಬಂದಿದ್ದಾನೆ. ಅದನ್ನು ಕಾರು ಚಾಲಕ ಪ್ರಶ್ನಿಸಿದ್ದಾನೆ. ಅದಕ್ಕೆ ಕೋಪಗೊಂಡ ಬೈಕ್‌ ಸವಾರ, ಕಾರು ಚಾಲಕನಿಗೆ ಮೀರರ್‌ ಇಳಿಸುವಂತೆ ಧಮ್ಕಿ ಹಾಕಿದ್ದಾನೆ.

ಆದರೆ, ಕಾರು ಚಾಲಕ ಇಳಿಸಿಲ್ಲ. ಅದರಿಂದ ಇನ್ನಷ್ಟು ಕೋಪಗೊಂಡ ಆರೋಪಿ, ಕಾರು ಚಾಲಕನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕಾರಿನ ಗಾಜು ಹೊಡೆಯಲು ಯತ್ನಿಸಿದ್ದಾನೆ.

ಬಳಿಕ ಮಧ್ಯದ ಬೆರಳು ತೋರಿಸಿ ಸ್ಥಳದಿಂದ ಪಾರಾರಿಯಾಗಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕರ್ನಾಟಕ ಪೋರ್ಟ್‌ಪೊಲೀಯಂ ಎಂಬ ಖಾತೆಯಲ್ಲಿ ವೈರಲ್‌ ಆಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ನಗರ ಪೊಲೀಸ್‌ ಆಯುಕ್ತರು, ಡಿಜಿಪಿಗೂ ಟ್ಯಾಗ್‌ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಸಂತ್ರಸ್ತರ ನಂಬರ್‌ ಕಳುಹಿಸಿ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next