Advertisement

Belthangady: ಚರಂಡಿಗೆ ಜಾರಿದ ಕಾರು

12:32 AM Oct 06, 2023 | Team Udayavani |

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು- ಅಂಬಡ್ತಾರು ಎನ್ನುವಲ್ಲಿ ಕೊಟ್ಟಿಗೆಹಾರ ಕಡೆಯಿಂದ ಉಜಿರೆಯತ್ತ ಚಲಿಸುತ್ತಿದ್ದ ಕಾರು ಚರಂಡಿಗೆ ಉರುಳಿದ ಘಟನೆ ಗುರುವಾರ ಬೆಳಗ್ಗೆ ನಡೆಯಿತು.

Advertisement

ಬೆಂಗಳೂರು ಮೂಲದ ಕಾರು ಇದಾಗಿದ್ದು, ಚಾಲಕನ ನಿದ್ದೆಯ ಮಂಪರಿನಿಂದ ಚರಂಡಿಗೆ ಜಾರಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಕಾರಿನ ಚಾಲಕ ಮತ್ತು ಪ್ರಯಾಣಿಕರು ಯಾವುದೇ ಹೆಚ್ಚಿನ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಈ ಸ್ಥಳದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸ್ಥಳೀಯರ ಸಹಕಾರದಲ್ಲಿ ಕಾರನ್ನು ಸ್ಥಳದಿಂದ ತೆರೆವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next