Advertisement

ಚಲಿಸುವಾಗಲೇ ಹೊತ್ತಿ ಉರಿದ ಕಾರು: ಮೂವರು ಪಾರು

05:42 PM Dec 18, 2021 | Shwetha M |

ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದ್ದು ಸುದೈವವಶಾತ್‌ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಪಾಯದಿಂದ ಪಾರಾಗಿದ್ದಾರೆ.

Advertisement

ಸೊಲ್ಲಾಪುರದಿಂದ ವಿಜಯಪುರ ನಗರಕ್ಕೆ ಬರುವಾಗ ನಗರದ ಹೊರ ವಲಯದಲ್ಲಿ ಈ ಘಟನೆ ನಡೆದಿದೆ. ಕೂಡಲೇ ಕಾರಿನಲ್ಲಿದ್ದ ಮೂವರು ಹೊರ ಬಂದು ಜೀವ ರಕ್ಷಿಸಿಕೊಂಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ವಿವರ ಲಭ್ಯವಾಗಿಲ್ಲ. ಆದರೆ ಸದರಿ ಕಾರು ವಿಶಾಲ ವಾಲಿ ಎಂಬವರಿಗೆ ಸೇರಿದ್ದೆಂದು ತಿಳಿದು ಬಂದಿದೆ. ಆದರ್ಶ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next