Advertisement

ಮರಕ್ಕೆ ಡಿಕ್ಕಿ ಹೊಡೆದ ಕಾರು ಮೂವರ ದುರ್ಮರಣ

08:22 AM Apr 02, 2018 | Team Udayavani |

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡ ಘಟನೆ ದಾವಣಗೆರೆ ಜಿಲ್ಲೆಯ ದೇವಿಕೆರೆಯ ಬಳಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

Advertisement

ಮೃತರನ್ನು ಮೊಹಮ್ಮದ್ ರಫೀಕ್ (37) ನಾಜ್ ಪೀರ್ (65) ಹಾಗೂ ಹಫೀಜ್ (56) ಮೂವರು ಜಗಳೂರು ನಿವಾಸಿಗಳೆಂದು ತಿಳಿದುಬಂದಿದೆ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದವರು ಹುಬ್ಬಳ್ಳಿಯಿಂದ ಜಗಳೂರಿಗೆ ಬರುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ ಇನ್ನೋರ್ವ ಗಂಭೀರ ಗಾಯಗೊಂಡಿದ್ದರು.  

ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.  

Advertisement

Udayavani is now on Telegram. Click here to join our channel and stay updated with the latest news.

Next