Advertisement

ರಸ್ತೆಯಲ್ಲಿ ನಮಾಜ್‌ ಪ್ರಕರಣ; ಶರಣ್‌ ಪಂಪ್‌ವೆಲ್‌ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್‌ ತಡೆ

11:35 PM Jun 07, 2024 | Team Udayavani |

ಬೆಂಗಳೂರು: ಮಂಗಳೂರು ನಗರದ ರಸ್ತೆಯಲ್ಲಿ ನಮಾಜ್‌ ಮಾಡಿದ ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣ ದಲ್ಲಿ ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್‌ ಹಂಚಿಕೊಂಡ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್‌ ಮುಖಂಡ ಶರಣ್‌ ಪಂಪ್‌ವೆಲ್‌ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್‌ ತಡೆ ನೀಡಿದೆ.

Advertisement

ಪ್ರಕರಣ ಸಂಬಂಧ ತನ್ನ ವಿರುದ್ಧದ ಎಫ್ಐಆರ್‌ ರದ್ದುಗೊಳಿಸುವಂತೆ ಕೋರಿ ಶರಣ್‌ ಸಲ್ಲಿಸಿರುವ ಅರ್ಜಿ ಯನ್ನು ನ್ಯಾ| ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್‌ ಶ್ಯಾಮ್ , ಅರ್ಜಿದಾರರು ಕಾನೂನು ಪಾಲಕರಾಗಿದ್ದಾರೆ. ನಗರದ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲೇ ಮುಸ್ಲಿಮರು ನಮಾಜ್‌ ಮಾಡಿದ್ದು, ರಸ್ತೆ ಸಂಚಾರಕ್ಕೆ ತಡೆ ಉಂಟಾಯಿತು. ಬಳಿಕ ಕದ್ರಿ ಠಾಣೆ ಪೊಲೀಸರು ಸ್ವಯಂ ಪ್ರಕರಣ ದಾಖ ಲಿಸಿದ್ದರು. ಬಳಿಕ ಪ್ರಕರಣ ದಾಖಸಿದ್ದ ಅಧಿಕಾರಿಯನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ, ಕೆಲವೇ ಗಂಟೆಗಳಲ್ಲಿ ಬಿ ರಿಪೋರ್ಟ್‌ ಹಾಕಲಾಗಿದೆ.

ಈ ಘಟನೆಯನ್ನು ಖಂಡಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಅರ್ಜಿದಾರರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಅದಕ್ಕಾಗಿ ಅವರ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದ್ದು ಸುಳ್ಳು ಆರೋಪ ಹೊರಿಸಲಾಗಿದೆ ಹಾಗಾಗಿ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.ಇದಕ್ಕೆ ಪ್ರತಿಕ್ರಯಿಸಿದ ನ್ಯಾಯ ಪೀಠ, ಹಲವು ಪ್ರಕರಣಗಳಲ್ಲಿ ಒಂದು ಚಾರ್ಜ್‌ಶೀಟ್‌ ಸಲ್ಲಿಸಲು ತಿಂಗಳು ಗಟ್ಟಲೆ ತೆಗೆದುಕೊಳ್ಳುತ್ತೀರಿ. ಈ ಪ್ರಕರಣದಲ್ಲಿ 24 ಗಂಟೆಯಲ್ಲಿ ಬಿ ರಿಪೋರ್ಟ್‌ ಸಲ್ಲಿಸಿದ್ದು ಹೇಗೆ ಎಂದು ಸರಕಾರಿ ಪರ ವಕೀಲರನ್ನು ಪ್ರಶ್ನಿಸಿತು.

Advertisement

Udayavani is now on Telegram. Click here to join our channel and stay updated with the latest news.

Next