Advertisement

ರಾಘವೇಶ್ವರ ಶ್ರೀಗಳ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್

11:17 PM Aug 29, 2019 | Team Udayavani |

ಬೆಂಗಳೂರು: ಆರ್ಥಿಕ ಅವ್ಯವಹಾರ ಗಳು ನಡೆದ ಹಿನ್ನೆಲೆಯಲ್ಲಿ ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಪೀಠದಿಂದ ಕೆಳಗಿಳಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವ ಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಯಿಂದ ನ್ಯಾ.ಮೊಹಮ್ಮದ್‌ ನವಾಜ್‌ ಹಿಂದೆ ಸರಿದಿದ್ದಾರೆ. ಈ ಕುರಿತು ಎದುರ್ಕುಲಾ ಈಶ್ವರ್‌ ಭಟ್‌ ಹಾಗೂ ಎ.ಕೆ.ಜಯಕೃಷ್ಣ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ಹಾಗೂ ನ್ಯಾ.ಮೊಹಮ್ಮದ್‌ ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬಂದಿತ್ತು.

Advertisement

ಕೋರ್ಟ್‌ ಆಫೀಸರ್‌ ವಿಚಾರಣೆಗಾಗಿ ಅರ್ಜಿ ಸಂಖ್ಯೆಯನ್ನು ಕೂಗಿದಾಗ ನ್ಯಾ.ಮೊಹಮ್ಮದ್‌ ನವಾಜ್‌ ಅವರು, ತಾವು ಈ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ಹೇಳಿದರು. ಆಗ ಅರ್ಜಿ ಋಯನ್ನು ಬೇರೊಂದು ನ್ಯಾಯ ಪೀಠದ ಮುಂದೆ ವಿಚಾರಣೆಗೆ ನಿಗದಿಪಡಿ ಸುವಂತೆ ರಿಜಿಸ್ಟ್ರಾರ್‌ಗೆ ಸೂಚಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next