Advertisement

ನೆರೆ ಹಾನಿ ಪ್ರದೇಶಗಳಿಗೆ ಕೇಂದ್ರದ ತಂಡ ಭೇಟಿ: 10 ದಿನದಲ್ಲಿ ಸರ್ಕಾರಕ್ಕೆ ವರದಿ

12:11 PM Sep 05, 2021 | Team Udayavani |

ಬೆಳಗಾವಿ: ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಸಾಕಷ್ಟು ಹಾನಿಯಾಗಿದ್ದು ಎಲ್ಲಾ ಪ್ರದೇಶಗಳ ಪರಿಶೀಲನೆ ನಂತರ 10 ದಿನಗಳಲ್ಲಿ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕೇಂದ್ರ ಗೃಹ ಇಲಾಖೆಯ ಸುಶೀಲ ಪಾಲ್ ಹೇಳಿದರು.

Advertisement

ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಬಾಧಿತಕ್ಕೊಳಗಾದ ಖಾನಾಪುರ ತಾಲೂಕಿನ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು ಸಮೀಕ್ಚೆ ಕಾರ್ಯ ಪೂರ್ಣಗೊಂಡ ನಂತರ ಗೃಹ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ 10 ದಿನಗಳಲ್ಲಿ ವರದಿ ನೀಡಲಾಗುವದು ಎಂದರು.

ರಾಜ್ಯದ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ ಬೆಳಗಾವಿ ಜಿಲ್ಲೆಯೊಂದರಲ್ಲೇ ಪ್ರತಿಶತ 50 ರಷ್ಟು ಹಾನಿಯಾಗಿದೆ. ಇದರಲ್ಲಿ ಬೆಳೆ ಹಾನಿ ಪ್ರಮಾಣ ಅಧಿಕವಾಗಿದೆ. ರಸ್ತೆ ಮೊದಲಾದ ಮೂಲಸೌಕರ್ಯಗಳಿಗೂ ಹಾನಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಇಬ್ಬರು ಯುವತಿಯರ ಮುದ್ದಿನ ಲವರ್: ‘ಟಾಸ್’ ಮೂಲಕ ವಧುವಿನ ನಿರ್ಣಯ, ಆದರೆ ಆಗಿದ್ದೇ ಬೇರೆ!

ಈಗ ಮೂರು ಭಾಗಗಳಲ್ಲಿ ಪರಿಶೀಲನೆ ಕಾರ್ಯ ನಡೆದಿದೆ. ನಂತರ ಎಲ್ಲ ಅಂಶಗಳನ್ನು ಪರಿಗಣಿಸಿ ವರದಿ ನೀಡಲಾಗುವದು. ಪ್ರಕೃತಿ ವಿಕೋಪದ ನಿಯಮಾವಳಿ ಪ್ರಕಾರ ಪರಿಹಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಅವರು ಹೇಳಿದರು.

Advertisement

ನಂತರ ಅಧಿಕಾರಿಗಳ ತಂಡವು ಹುಕ್ಕೇರಿ ತಾಲೂಕಿಗೆ ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಬೆಳೆ ಪ್ರದೇಶದ ಪರಿಶೀಲನೆ ನಡೆಸಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next